2:53 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕಾವೂರು: ಬಿಜೆಪಿಯ ಗೋಡೆ ಬರಹ ಕಾರ್ಯಕ್ರಮಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

03/02/2024, 15:52

ಮಂಗಳೂರು(reporterkarnataka.com): ಭಾರತವು ಇಂದು ಆರ್ಥಿಕವಾಗಿ ಬಲಿಷ್ಠವಾಗಲು, ರಾಜತಾಂತ್ರಿಕ ಜಾಣ್ಮೆ ,ರಾಷ್ಟ್ರೀಯವಾದ ಮತ್ತು ಹಿಂದೂ ಸಮಾಜದ ಗೌರವ, ಅಸ್ಮಿತೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಇದೆಲ್ಲವೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದಿಂದ ಸಾಧ್ಯವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.

ಲೋಕಸಭಾ ಚುನಾವಣೆಯ ಪ್ರಚಾರಾರ್ಥವಾಗಿ ಉತ್ತರ ವಿಧಾನಸಭಾ ಕ್ಷೇತ್ರದ ಕಾವೂರು ಗಾಂಧಿ ನಗರದಲ್ಲಿ ಬಿಜೆಪಿಯ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶವು ಕಳೆದ 10 ವರ್ಷಗಳಲ್ಲಿ ಅಮೂಲಾಗ್ರ ಬದಲಾವಣೆ ಕಂಡು ಬರುತ್ತಿದೆ. ಇದು ಮುಂದುವರಿಯಲು ಮತ್ತೆ ಬಿಜೆಪಿ ಸರಕಾರ ಚುಕ್ಕಾಣಿ ಹಿಡಿಯಬೇಕಿದೆ. ಬಿಜೆಪಿ ಕಾರ್ಯಕರ್ತರು ಲೋಕಸಸಭಾ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೇರಿಸಲು ಉತ್ಸಾಹದಲ್ಲಿದ್ದಾರೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ರಣತಂತ್ರ ರೂಪಿಸಲಾಗಿದೆ. ಇದರ ಒಂದು ಭಾಗವಾಗಿ ಗೋಡೆ ಬರಹಕ್ಕೆ ಚಾಲನೆ ನೀಡಲಾಗಿದೆ ಎಂದರು.ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಪ್ರದಾನ ಕಾರ್ಯದರ್ಶಿ ಸಂದೀಪ್ ,ಗೋಡೆ ಬರಹ ಜಿಲ್ಲಾ ಸಂಚಾಲಕ ಮಹೇಶ್ ಜೋಗಿ,ಮಂಡಲ ಸಂಚಾಲಕ ಅಖಿಲ್ ಶೆಟ್ಟಿ ,ಬಿಜೆಪಿ ಮುಖಂಡರಾಧ ರಣ್‍ದೀಪ್ ಕಾಂಚನ್, ಚಂದ್ರಿಕಾ ಪ್ರಭಾಕರ್ ಮನಪಾ ಸದಸ್ಯರಾದ ಸುಮಂಗಳ ರಾವ್, ಲೋಹಿತ್ ಅಮೀನ್, ಕಿರಣ್ ಕುಮಾರ್ ಕೋಡಿಕಲ್, ಮನೋಜ್ ಕುಮಾರ್, ಶಿತೇಶ್ ಕೊಂಡೆ,ಶಾನ್ವಾಝ್ ಹುಸೈನ್, ಸಾಕ್ಷಾತ್ ಶೆಟ್ಟಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು