1:14 AM Friday27 - February 2026
ಬ್ರೇಕಿಂಗ್ ನ್ಯೂಸ್
ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ

ಇತ್ತೀಚಿನ ಸುದ್ದಿ

ಕಾವೂರು ದ. ಕ. ಜಿಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ: 1 ಕೋಟಿ ರೂ.ವೆಚ್ಚದ ನೂತನ ಕಟ್ಟಡಕ್ಕೆ ಶಂಕು ಸ್ಥಾಪನೆ

18/09/2024, 23:05

ಮಂಗಳೂರು(reporterkarnataka.com): ಕಾವೂರು ದ. ಕ. ಜಿಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂದರ್ಭದಲ್ಲಿ ಅಂದಾಜು 1 ಕೋಟಿ ರೂ. ವೆಚ್ಚದಲ್ಲಿ. ನೂತನ ಕಟ್ಟಡದ ಶಂಕು ಸ್ಥಾಪನೆ ಸಮಾರಂಭ ಬುಧವಾರ ನಡೆಯಿತು.
ಮಂಗಳೂರು ನಗರ ಉತ್ತರದ ಶಾಸಕ ಡಾ.ಭರತ್‌ ಶೆಟ್ಟಿ
ವೈ. ಹಾಗೂ ಕಟ್ಟಡದ ದಾನಿ, ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೇಶವ ಅಮೀನ್‌ ಅವರು ಶಂಕು ಸ್ಥಾಪನೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು ಇಲ್ಲಿನ ಶಾಲೆ ನೂರು ವರ್ಷಗಳನ್ನು ಪೂರೈಸುತ್ತಿದ್ದು ಸಾವಿರ ಸಾವಿರ ಮಂದಿ ವಿದ್ಯಾರ್ಥಿಗಳು ಕಲಿತು ಇಂದು ಸಮಾಜದ ಉನ್ನತ ಸ್ತರದಲ್ಲಿದ್ದಾರೆ. ಇದೀಗ ಶಾಲೆಯನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೇಶವ ಅಮೀನ್‌ ಉತ್ತಮ ಧ್ಯೆಯದೊಂದಿಗೆ ಮುಂದಾಗಿದ್ದು ಶ್ಲಾಘನೀಯ. ಇತರ ಮೂಲಸೌಕರ್ಯ ಸೇರಿದಂತೆ ಸುಸಜ್ಜಿತ ಶಾಲೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳೂರು ಉತ್ತರ ವಲಯ ಇದರ ಜೇಮ್್ಸ ಕುಟಿನೋ
ಮನಪಾ ಸದಸ್ಯರಾದ ಸುಮಂಗಲಾ ರಾವ್, ಕಾವೂರು ಸಿಆ‌ರ್ ಪಿ ದೀಪಿಕಾ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಚಂದ್ರಹಾಸ್‌ ಕಾರ್ಯದರ್ಶಿಗಳಾದ ವಿಕೇಶ್ ಮತ್ತು ಲಾವಣ್ಯ ಶೆಟ್ಟಿ, ನ್ಯಾಯವಾದಿ ಗುರುಪ್ರಸಾದ್ , ನಿವೃತ್ತ ಮುಖ್ಯ ಶಿಕ್ಷಕರಾದ ಚಂದ್ರಾವತಿ ಸುರೇಂದ್ರನಾಥ ಶೆಟ್ಟಿ,ಭುಜಂಗ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷಲಕ್ಷ್ಮಣ ಛಲವಾದಿ, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ನಿತೇಶ್ ಕಾವೂರು, ಅಜಿತ್, ಶಿತೇಶ್ ಕೊಂಡೆ, ಸಮಾಜ ಸೇವಕರಾದ ‌ ಹಸನಬ್ಬ, ಪೆಲ್ಲಿರೆಗೋ.ಅಶ್ವಿನಿ, ಗೋಕುಲ್ ದಾಸ್ ಪ್ರಭು, ಅರ್ಚನಾ, ಕೃಷ್ಣಪ್ಪ ಸಾಲ್ಯಾನ್, ಕುಸುಮಕರ್, ಶಾಲಾ ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಎಸ್‌ ಡಿಎಂಸಿಯ ಸದಸ್ಯರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಸೀತಮ್ಮ ಚೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು