8:30 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಾವೂರು ದ. ಕ. ಜಿಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ: 1 ಕೋಟಿ ರೂ.ವೆಚ್ಚದ ನೂತನ ಕಟ್ಟಡಕ್ಕೆ ಶಂಕು ಸ್ಥಾಪನೆ

18/09/2024, 23:05

ಮಂಗಳೂರು(reporterkarnataka.com): ಕಾವೂರು ದ. ಕ. ಜಿಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂದರ್ಭದಲ್ಲಿ ಅಂದಾಜು 1 ಕೋಟಿ ರೂ. ವೆಚ್ಚದಲ್ಲಿ. ನೂತನ ಕಟ್ಟಡದ ಶಂಕು ಸ್ಥಾಪನೆ ಸಮಾರಂಭ ಬುಧವಾರ ನಡೆಯಿತು.
ಮಂಗಳೂರು ನಗರ ಉತ್ತರದ ಶಾಸಕ ಡಾ.ಭರತ್‌ ಶೆಟ್ಟಿ
ವೈ. ಹಾಗೂ ಕಟ್ಟಡದ ದಾನಿ, ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೇಶವ ಅಮೀನ್‌ ಅವರು ಶಂಕು ಸ್ಥಾಪನೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು ಇಲ್ಲಿನ ಶಾಲೆ ನೂರು ವರ್ಷಗಳನ್ನು ಪೂರೈಸುತ್ತಿದ್ದು ಸಾವಿರ ಸಾವಿರ ಮಂದಿ ವಿದ್ಯಾರ್ಥಿಗಳು ಕಲಿತು ಇಂದು ಸಮಾಜದ ಉನ್ನತ ಸ್ತರದಲ್ಲಿದ್ದಾರೆ. ಇದೀಗ ಶಾಲೆಯನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೇಶವ ಅಮೀನ್‌ ಉತ್ತಮ ಧ್ಯೆಯದೊಂದಿಗೆ ಮುಂದಾಗಿದ್ದು ಶ್ಲಾಘನೀಯ. ಇತರ ಮೂಲಸೌಕರ್ಯ ಸೇರಿದಂತೆ ಸುಸಜ್ಜಿತ ಶಾಲೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳೂರು ಉತ್ತರ ವಲಯ ಇದರ ಜೇಮ್್ಸ ಕುಟಿನೋ
ಮನಪಾ ಸದಸ್ಯರಾದ ಸುಮಂಗಲಾ ರಾವ್, ಕಾವೂರು ಸಿಆ‌ರ್ ಪಿ ದೀಪಿಕಾ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಚಂದ್ರಹಾಸ್‌ ಕಾರ್ಯದರ್ಶಿಗಳಾದ ವಿಕೇಶ್ ಮತ್ತು ಲಾವಣ್ಯ ಶೆಟ್ಟಿ, ನ್ಯಾಯವಾದಿ ಗುರುಪ್ರಸಾದ್ , ನಿವೃತ್ತ ಮುಖ್ಯ ಶಿಕ್ಷಕರಾದ ಚಂದ್ರಾವತಿ ಸುರೇಂದ್ರನಾಥ ಶೆಟ್ಟಿ,ಭುಜಂಗ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷಲಕ್ಷ್ಮಣ ಛಲವಾದಿ, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ನಿತೇಶ್ ಕಾವೂರು, ಅಜಿತ್, ಶಿತೇಶ್ ಕೊಂಡೆ, ಸಮಾಜ ಸೇವಕರಾದ ‌ ಹಸನಬ್ಬ, ಪೆಲ್ಲಿರೆಗೋ.ಅಶ್ವಿನಿ, ಗೋಕುಲ್ ದಾಸ್ ಪ್ರಭು, ಅರ್ಚನಾ, ಕೃಷ್ಣಪ್ಪ ಸಾಲ್ಯಾನ್, ಕುಸುಮಕರ್, ಶಾಲಾ ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಎಸ್‌ ಡಿಎಂಸಿಯ ಸದಸ್ಯರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಸೀತಮ್ಮ ಚೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು