10:00 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕಾವೂರು ಪೊಲೀಸರ ಕಾರ್ಯಾಚರಣೆ: ನಿಷೇಧಿತ ಮಾದಕ ದ್ರವ್ಯ, ಮಾರಕ ಆಯುಧ, ಕಾರು ವಶ; ಇಬ್ಬರ ಬಂಧನ

13/07/2023, 12:11

ಮಂಗಳೂರು(reporterkarnataka.com): ಮಾರಕ ಆಯುಧಗಳೊಂದಿಗೆ ನಿಷೇಧಿತ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಪಡುಶೆಡ್ಡೆ ಗ್ರಾಮದ ಮೂಡುಶೆಡ್ಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ನಿಷೇಧಿತ ಮಾದಕ ದ್ರವ್ಯ 4 ಗ್ರಾಂ ಎಂಡಿಎಂಎ ಅನ್ನು 3 ಮಾರಕ ಆಯುಧಗಳೊಂದಿಗೆ ಮಾರಾಟ ಮಾಡಲು ಬಂದವರನ್ನು ಪತ್ತೆ ವಶಪಡಿಸಿಕೊಳ್ಳುವಲ್ಲಿ ಕಾವೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಪಿಲಿಕುಳದ ಮೊಹಮ್ಮದ್ ಶಾರೂಕ್ (27) ಹಾಗೂ ಶೇಡಿಗುರಿಯ ಜಗದೀಶ್‌ (45) ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಅವರ ವಶದಲ್ಲಿದ್ದ 4.5 ಗ್ರಾಂ ಎಂಡಿಎಂಎ ಸ್ವಾಧಿನಪಡಿಸಿಕೊಂಡಿದ್ದಾರೆ. 3 ಮಾರಕ ಆಯುಧ ಹಾಗೂ 1 ಮಾರುತಿ ಸ್ವಿಫ್ಟ್ ಕಾರು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 4.41 ಲಕ್ಷ ರೂ. ಆಗಿರುತ್ತದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಪೊಲೀಸ್ ಆಯುಕ್ತರ ನಿರ್ದೆಶನದಂತೆ ಡಿಸಿಪಿ (ಕಾ & ಸು) ಮತ್ತು ಡಿಸಿಪಿ (ಅಪರಾಧ ಮತ್ತು ಸಂಚಾರ) ರವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ಉತ್ತರ ಉಪ-ವಿಭಾಗದ ಎಸಿಪಿ ಮನೋಜ್ ಕುಮಾರ್ ಅವರ ನೇತೃತ್ವದಲ್ಲಿ ಕಾವೂರು ಪೊಲೀಸ್ ನಿರೀಕ್ಷಕರಾದ ಗುರುರಾಜ್ ಮತ್ತು ಪಿಎಸ್ ಐ ಮಲ್ಲಿಕಾರ್ಜುನ ಬಿರಾದಾರ, ಲತೇಶ್ ಹಾಗೂ ಸಿಬ್ಬಂದಿಗಳಾದ ತಾರಾನಾಥ ಪುತ್ರನ್, ಕಿಶೋರ್, ಸಂಭಾಜಿ ಕಾರ್ಯಾಚರಣೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು