4:57 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಾವೂರು ಪೊಲೀಸರ ಕಾರ್ಯಾಚರಣೆ: ನಿಷೇಧಿತ ಮಾದಕ ದ್ರವ್ಯ, ಮಾರಕ ಆಯುಧ, ಕಾರು ವಶ; ಇಬ್ಬರ ಬಂಧನ

13/07/2023, 12:11

ಮಂಗಳೂರು(reporterkarnataka.com): ಮಾರಕ ಆಯುಧಗಳೊಂದಿಗೆ ನಿಷೇಧಿತ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಪಡುಶೆಡ್ಡೆ ಗ್ರಾಮದ ಮೂಡುಶೆಡ್ಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ನಿಷೇಧಿತ ಮಾದಕ ದ್ರವ್ಯ 4 ಗ್ರಾಂ ಎಂಡಿಎಂಎ ಅನ್ನು 3 ಮಾರಕ ಆಯುಧಗಳೊಂದಿಗೆ ಮಾರಾಟ ಮಾಡಲು ಬಂದವರನ್ನು ಪತ್ತೆ ವಶಪಡಿಸಿಕೊಳ್ಳುವಲ್ಲಿ ಕಾವೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಪಿಲಿಕುಳದ ಮೊಹಮ್ಮದ್ ಶಾರೂಕ್ (27) ಹಾಗೂ ಶೇಡಿಗುರಿಯ ಜಗದೀಶ್‌ (45) ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಅವರ ವಶದಲ್ಲಿದ್ದ 4.5 ಗ್ರಾಂ ಎಂಡಿಎಂಎ ಸ್ವಾಧಿನಪಡಿಸಿಕೊಂಡಿದ್ದಾರೆ. 3 ಮಾರಕ ಆಯುಧ ಹಾಗೂ 1 ಮಾರುತಿ ಸ್ವಿಫ್ಟ್ ಕಾರು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 4.41 ಲಕ್ಷ ರೂ. ಆಗಿರುತ್ತದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಪೊಲೀಸ್ ಆಯುಕ್ತರ ನಿರ್ದೆಶನದಂತೆ ಡಿಸಿಪಿ (ಕಾ & ಸು) ಮತ್ತು ಡಿಸಿಪಿ (ಅಪರಾಧ ಮತ್ತು ಸಂಚಾರ) ರವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ಉತ್ತರ ಉಪ-ವಿಭಾಗದ ಎಸಿಪಿ ಮನೋಜ್ ಕುಮಾರ್ ಅವರ ನೇತೃತ್ವದಲ್ಲಿ ಕಾವೂರು ಪೊಲೀಸ್ ನಿರೀಕ್ಷಕರಾದ ಗುರುರಾಜ್ ಮತ್ತು ಪಿಎಸ್ ಐ ಮಲ್ಲಿಕಾರ್ಜುನ ಬಿರಾದಾರ, ಲತೇಶ್ ಹಾಗೂ ಸಿಬ್ಬಂದಿಗಳಾದ ತಾರಾನಾಥ ಪುತ್ರನ್, ಕಿಶೋರ್, ಸಂಭಾಜಿ ಕಾರ್ಯಾಚರಣೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು