4:24 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕಾವೂರು: ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮ; ಹಕ್ಕು ಪತ್ರ,ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ

31/10/2022, 23:40

ಸುರತ್ಕಲ್(reporterkarnataka.com): ನಾಗರಿಕರಿಗೆ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ನಗರದ ಕಾವೂರಿನಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ ನೀಡಿದರು. ಹಕ್ಕುಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಿಸಲಾಯಿತು. ಸುಮಾರು 3000 ಮಂದಿ ನಾಗರಿಕರು ಭಾಗವಹಿಸಿದ್ದು, 30 ಹೆಚ್ಚು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಪರಿಹಾರ ಧನ,ವೃದ್ದಾಪ್ಯ ದಾಖಲೆ ವಿತರಣೆ ಮಾಡಲಾಯಿತಲ್ಲದೆ ,ಅಭಾ ಕಾರ್ಡ್ ಸಹಿತ ಜನಸಾಮಾನ್ಯರಲ್ಲಿ ಮಾಹಿತಿಯ ಕೊರತೆ ಇರುವ ಸರಕಾರದ ಅನೇಕ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಸರಕಾರದ ಯೋಜನೆ, ಸೌಲಭ್ಯಗಳನ್ನು ಸುಲಭವಾಗಿ ಜನರಿಗೆ ತಲುಪಿಸಲು ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಹಿಡಿದು ಕಾರ್ಮಿಕ ಇಲಾಖೆಯನ್ನು ಸೇರಿಸಿ ಕಂದಾಯ ಇಲಾಖೆಯ ತನಕ ವಿವಿಧ ಇಲಾಖೆಗಳು ಒಂದೇ ಸೂರಿನಲ್ಲಿ ಪರಿಹಾರ ನೀಡುವಂತೆ ಮಾಡಲಾಗಿದೆ. ಹಕ್ಕುಪತ್ರ, ಮಾಸಾಶನ, ಪಿಂಚಣಿ, ವಿಕಲಚೇತನ ಸವಲತ್ತು, ಕಾರ್ಮಿಕ ಕಾರ್ಡ್, ಆಯುಷ್ಮಾನ್ ಕಾರ್ಡ್, ಆಧಾರ ಕಾರ್ಡ್ ಸಹಿತ ಎಲ್ಲವೂ ಇಲ್ಲಿ ಶೀಘ್ರದಲ್ಲಿ ಮಾಡಿಕೊಡಲಾಗುತ್ತದೆ. ಯಾವುದೇ ಕಾರಣಕ್ಕೆ ಒಂದು ದಿನದಲ್ಲಿ ಪರಿಹಾರ ಆಗದ ಸಮಸ್ಯೆ ಇದ್ದರೆ ಇಲಾಖೆ ಅಧಿಕಾರಿಗಳೊಂದಿಗೆ ಕಾರಣ ಚರ್ಚಿಸಿ ವಾರದೊಳಗೆ ಮನೆ, ಕಚೇರಿಗೆ ಪ್ರಮಾಣಪತ್ರ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ನುಡಿದರು.


ಕಾರ್ಯಕ್ರಮದಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ತಹಶೀಲ್ದಾರ್ ನವೀನ್ ಕುಮಾರ್, ಮನಪಾ ಸದಸ್ಯರಾದ ಶರತ್ ಕುಮಾರ್, ಸುಮಂಗಳ ರಾವ್, ಕಿರಣ್ ಕುಮಾರ್ ಕೋಡಿಕಲ್, ಲೋಹಿತ್ ಅಮೀನ್, ಮನೋಜ್ ಕುಮಾರ್, ಅನಿಲ್ ಕುಮಾರ್ , ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಮಹಾಶಕ್ತಿ ಕೇಂದ್ರದ‌ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಪ್ರಮುಖರು, ವಿವಿಧ ಇಲಾಖೆಯ ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು