7:44 PM Saturday11 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಕಾವೂರು: ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮ; ಹಕ್ಕು ಪತ್ರ,ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ

31/10/2022, 23:40

ಸುರತ್ಕಲ್(reporterkarnataka.com): ನಾಗರಿಕರಿಗೆ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ನಗರದ ಕಾವೂರಿನಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ ನೀಡಿದರು. ಹಕ್ಕುಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಿಸಲಾಯಿತು. ಸುಮಾರು 3000 ಮಂದಿ ನಾಗರಿಕರು ಭಾಗವಹಿಸಿದ್ದು, 30 ಹೆಚ್ಚು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಪರಿಹಾರ ಧನ,ವೃದ್ದಾಪ್ಯ ದಾಖಲೆ ವಿತರಣೆ ಮಾಡಲಾಯಿತಲ್ಲದೆ ,ಅಭಾ ಕಾರ್ಡ್ ಸಹಿತ ಜನಸಾಮಾನ್ಯರಲ್ಲಿ ಮಾಹಿತಿಯ ಕೊರತೆ ಇರುವ ಸರಕಾರದ ಅನೇಕ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಸರಕಾರದ ಯೋಜನೆ, ಸೌಲಭ್ಯಗಳನ್ನು ಸುಲಭವಾಗಿ ಜನರಿಗೆ ತಲುಪಿಸಲು ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಹಿಡಿದು ಕಾರ್ಮಿಕ ಇಲಾಖೆಯನ್ನು ಸೇರಿಸಿ ಕಂದಾಯ ಇಲಾಖೆಯ ತನಕ ವಿವಿಧ ಇಲಾಖೆಗಳು ಒಂದೇ ಸೂರಿನಲ್ಲಿ ಪರಿಹಾರ ನೀಡುವಂತೆ ಮಾಡಲಾಗಿದೆ. ಹಕ್ಕುಪತ್ರ, ಮಾಸಾಶನ, ಪಿಂಚಣಿ, ವಿಕಲಚೇತನ ಸವಲತ್ತು, ಕಾರ್ಮಿಕ ಕಾರ್ಡ್, ಆಯುಷ್ಮಾನ್ ಕಾರ್ಡ್, ಆಧಾರ ಕಾರ್ಡ್ ಸಹಿತ ಎಲ್ಲವೂ ಇಲ್ಲಿ ಶೀಘ್ರದಲ್ಲಿ ಮಾಡಿಕೊಡಲಾಗುತ್ತದೆ. ಯಾವುದೇ ಕಾರಣಕ್ಕೆ ಒಂದು ದಿನದಲ್ಲಿ ಪರಿಹಾರ ಆಗದ ಸಮಸ್ಯೆ ಇದ್ದರೆ ಇಲಾಖೆ ಅಧಿಕಾರಿಗಳೊಂದಿಗೆ ಕಾರಣ ಚರ್ಚಿಸಿ ವಾರದೊಳಗೆ ಮನೆ, ಕಚೇರಿಗೆ ಪ್ರಮಾಣಪತ್ರ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ನುಡಿದರು.


ಕಾರ್ಯಕ್ರಮದಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ತಹಶೀಲ್ದಾರ್ ನವೀನ್ ಕುಮಾರ್, ಮನಪಾ ಸದಸ್ಯರಾದ ಶರತ್ ಕುಮಾರ್, ಸುಮಂಗಳ ರಾವ್, ಕಿರಣ್ ಕುಮಾರ್ ಕೋಡಿಕಲ್, ಲೋಹಿತ್ ಅಮೀನ್, ಮನೋಜ್ ಕುಮಾರ್, ಅನಿಲ್ ಕುಮಾರ್ , ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಮಹಾಶಕ್ತಿ ಕೇಂದ್ರದ‌ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಪ್ರಮುಖರು, ವಿವಿಧ ಇಲಾಖೆಯ ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು