7:16 PM Tuesday14 - October 2025
ಬ್ರೇಕಿಂಗ್ ನ್ಯೂಸ್
ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ… ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ…

ಇತ್ತೀಚಿನ ಸುದ್ದಿ

ಕಾವ್ಯವನ್ನು ಅನುಭವಿಸಿ ಬರೆದರೆ ಉತ್ತಮ ಕವನ ಬರುತ್ತೆ: ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೊಡೆ

15/08/2022, 18:57

ಮಂಗಳೂರು(reporterkarnataka.com):ಪ್ರೇರಣಾತ್ಮಕವಾಗಿ ಬರೆಯುವ ಸಾಹಿತಿಗಳು  ನಡು ನಡುವೆ ವಿರಾಮ ತೆಗೆದು ಕೊಂಡು ಅಭ್ಯಸಿಸಿ ಬರೆಯುವ ಹವ್ಯಾಸ ಇಟ್ಟುಕೊಳ್ಳಬೇಕು  ಆ ಮೂಲಕ ಒಂದು ಸೃಜನಾತ್ಮಕ ಸಾಹಿತ್ಯ ರಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೋಡೆ ಹೇಳಿದರು .  

ಅವರು  ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿ ಬಾಲಭವನದಲ್ಲಿ ಸ್ವಾತಂತ್ರ್ಯಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ ಭಾರತಾಂಬೆಗೆ ಕನ್ನಡದಾರತಿ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಈಗ ಸಂಘಟಕರು, ಸಂಶೋಧಕರು ಮತ್ತು ಸಾಹಿತಿಗಳು ಈ ಮೂರು ವರ್ಗದವರಿಂದ ಸಾಹಿತ್ಯ ಸೇವೆ ನಡೀತಿದೆ. ಇದರಲ್ಲಿ ಸಾಹಿತಿಗಳು ಸಂಶೋಧನೆ ಮತ್ತು ಸಂಘಟನೆ ಮಾಡಿದ್ರೆ ಉತ್ತಮ ಸಾಹಿತ್ಯ ಬರುತ್ತದೆ ಎಂದರು.   

ಇದೇ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಗಝಲ್ ಕವಿ ಹಾಗೂ ಮುಕ್ತಕ ಕವಿ ಎಂದೇ ಜನಪ್ರಿಯರಾದ ಡಾ. ಸುರೇಶ್ ನೆಗಳಗುಳಿ ಅವರನ್ನು ಸನ್ಮಾನಿಸಲಾಯಿತು. 

ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಗುಣಾಜೆ ರಾಮಚಂದ್ರ ಭಟ್ ಮಾತನಾಡಿ, ಕವಿತೆ ಕಟ್ಟುತ್ತಾ ಹೋದಂತೆ ಅದು ಹುಟ್ಟುವುದು, ಕವನವನ್ನು ಮೊದಲ ಬಾರಿಗೆ ಓದಿದಾಗ ಎಲ್ಲಾ ಅರ್ಥವಾಗದೆ ಮರಳಿ ಓದಿಸಬೇಕು.  ಹಾಗೆಂದು ಕವನಗಳು ಅರ್ಥ ಮಾಡಲು ತುಂಬಾ ಕಷ್ಟವಾಗಿರಲೂಬಾರದು.  ಕವಿಗಳು ನಿರಂತರ ಅಧ್ಯಯನ ಮಾಡುತ್ತಿರಬೇಕು ,  ಶಬ್ಧ ಸಂಪತ್ತನ್ನು ಗಳಿಸಿ ಜೀವನಾನುಭವ ಹೊಂದಿರಬೇಕೆಂದು ಹೇಳಿದರು.    

 KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಸ್ವಾಗತಿಸಿ ಪ್ರಾಸ್ತಾವನೆಗೈದರು. NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಹಾಗೂ ಕವಯತ್ರಿ ರೇಖಾ ಸುದೇಶ್ ರಾವ್  ಉಪಸ್ಥಿತರಿದ್ದರು. ರೇಶ್ಮಾ ಶೆಟ್ಟಿ ಗೋರೂರು ನಿರೂಪಿಸಿದರು. ನಂತರ ನಡೆದ ಕವಿಗೋಷ್ಠಿಯಲ್ಲಿ ವಿವಿಧ ಜಿಲ್ಲೆಯ ಸುಮಾರು 30 ಕ್ಕೂ ಹೆಚ್ಚು ಕವಿಗಳು ತಮ್ಮ ಸ್ವರಚಿತ ಕವನ ವಾಚನ ಮಾಡಿದರು.  ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗೀತ ಗಾಯನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು