4:45 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಕೀಟನಾಶಕ ಕುಡಿದು 2 ವರ್ಷದ ಮಗು ದಾರುಣ ಸಾವು: ಜ್ಯೂಸ್ ಎಂದು ಗ್ರಹಿಸಿ ಸೇವಿಸಿದ ಕಂದಮ್ಮ

04/09/2023, 20:54

ಚನ್ನಪಟ್ಟಣ(reporterkarnataka.com): ರೇಷ್ಮೆ ಹುಳುವಿಗೆ ಸಿಂಪಡಿಸಲು ತಂದು ಇಟ್ಟಿದ್ದ ಕೀಟನಾಶಕವನ್ನು ಕುಡಿದು 2 ವರ್ಷದ ಕಂದಮ್ಮ ಸಾವನ್ನಪ್ಪಿದ ದಾರುಣ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತಪಟ್ಟ ಮಗುವನ್ನು ಯಶಾಂಕ್ ಕೆ.ಗೌಡ ಎಂದು
ತಿಳಿದು ಬಂದಿದೆ. ರೇಷ್ಮೆ ಹುಳುವಿಗೆ ಸಿಂಪಡಣೆ ಮಾಡಲು ಮನೆಯಲ್ಲಿ ತಂದಿಟ್ಟಿದ್ದ ಕ್ರೀಮಿನಾಶಕವನ್ನು ಜ್ಯೂಸ್ ಎಂದು ಗ್ರಹಿಸಿ ಮಗು ಸೇವಿಸಿದೆ ಎನ್ನಲಾಗಿದೆ.
ಅಸ್ವಸ್ಥಗೊಂಡ ಮಗುವಿಗೆ ಚನ್ನಪಟ್ಟಣ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಗುವು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು