12:03 PM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಕೆಲರಾಯ್ ಯಲ್ಲಿ ‘ಗಾದ್ಯಾಂತ್ ಗಮ್ಮತ್’: ಕೃಷಿಕ ಜ್ಯೂಡ್ ಕರ್ನೆಲಿಯೊ ಅವರಿಗೆ ಸನ್ಮಾನ

03/09/2024, 23:24

ಮಂಗಳೂರು(reporterkarnataka.com): ಸಂತ ಅನ್ನಾ ಚರ್ಚ್ ಕೆಲರಾಯ್, ಇಲ್ಲಿನ ‘ಭಾರತೀಯ ಕಥೋಲಿಕ್ ಯುವ ಸಂಚಾಲನ’ವು ಭಾನುವಾರ ‘ಗಾದ್ಯಾಂತ್ ಗಮ್ಮತ್’ (ಗದ್ದೆಯಲ್ಲಿ ಗಮ್ಮತ್) ಎಂಬ ಕಾರ್ಯಕ್ರಮವನ್ನು ಕೆಲರಾಯ್ ತಾರಿಗುಡ್ಡೆ ಗದ್ದೆಯಲ್ಲಿ ಆಯೋಜಿಸಿತ್ತು.


ಬೆಳಿಗ್ಗೆ 9.30 ಗಂಟೆಗೆ ಸಂತ ಅನ್ನಾ ದೇವಾಲಯದ ಧರ್ಮಗುರುಗಳಾದ ಫಾ| ಸಿಲ್ವೆಸ್ಟರ್ ಡಿಕೋಸ್ಟಾರವರು ಆಶೀರ್ವಚನದ ಮೂಲಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಐಸಿವೈಎಮ್ ಸಚೇತಕರಾದ ವಿನೋದ್ ಪಿರೇರಾ, ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಂತೋಷ್ ಡಿಕೋಸ್ಟಾ, ಕಾರ್ಯದರ್ಶಿ ಸೆಲಿನ್ ಡಿಮೆಲ್ಲೊ, ಫಾ| ರೋಶನ್ ಫೆರ್ನಾಂಡಿಸ್, ಕಾರ್ಪರೇಟರ್ ರಘು ಸಾಲಿಯಾನ್, ಜಯಂತಿ ದೇವಸ ಮುಂತಾದ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಪಿಂಗಾರ ಅರಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸರ್ವಧರ್ಮಗಳ ಸಹಕಾರದಿಂದ ಈ ಕಾರ್ಯಕ್ರಮಕ್ಕೆ ಕಳೆಬಂದಿತ್ತು.
ಅನೇಕ ವರ್ಷಗಳಿಂದ ತೆನೆಹಬ್ಬಕ್ಕೆ ತೆನೆಯನ್ನು ದಾನ ಮಾಡುತ್ತಿರುವ ಕೃಷಿಕ ಜ್ಯೂಡ್ ಕರ್ನೆಲಿಯೊ ಇವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ‘ಪೆಪ್ಸಿ ಲಕ್ಕಿ ಡ್ರಾ’ದಲ್ಲಿ ಅನೇಕರು ಭಾಗವಹಿಸಿ ಬಹುಮಾನ ಗೆದ್ದರು. ಸರ್ವರಿಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ಸ್ಪರ್ಧೆಗಳನ್ನು ಬೆಳಿಗ್ಗೆ 10ರಿಂದ ಸಂಜೆ 5 ರ ತನಕ ನಡೆಸಿ, ಸಂಜೆಯ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. ಬಂದಂತಹ ಗಣ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮನೀಶಾ ಡಿಸೋಜಾ ಸ್ವಾಗತಿಸಿ, ಅಲಿಷಾ ಕ್ರಾಸ್ತಾ ಧನ್ಯವಾದ ಸಮರ್ಪಣೆ ಗೈದರು.
ಕಾರ್ಯಕ್ರಮವನ್ನು ಸಂತೋಷ್ ಡಿಕೋಸ್ಟಾ ಹಾಗೂ ಬೆನೊಯ್ ಡಿಸೋಜಾ ನಡೆಸಿಕೊಟ್ಟರು. ಸಣ್ಣ ಮಕ್ಕಳಿಂದ ಹಿಡಿದು ವೃಯೋವೃದ್ಧರವರೆಗೆ ಎಲ್ಲರೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಕೆಸರಿನ ಗದ್ದೆಯಲ್ಲಿ ಆನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು