5:48 PM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೆಲರಾಯ್ ಯಲ್ಲಿ ‘ಗಾದ್ಯಾಂತ್ ಗಮ್ಮತ್’: ಕೃಷಿಕ ಜ್ಯೂಡ್ ಕರ್ನೆಲಿಯೊ ಅವರಿಗೆ ಸನ್ಮಾನ

03/09/2024, 23:24

ಮಂಗಳೂರು(reporterkarnataka.com): ಸಂತ ಅನ್ನಾ ಚರ್ಚ್ ಕೆಲರಾಯ್, ಇಲ್ಲಿನ ‘ಭಾರತೀಯ ಕಥೋಲಿಕ್ ಯುವ ಸಂಚಾಲನ’ವು ಭಾನುವಾರ ‘ಗಾದ್ಯಾಂತ್ ಗಮ್ಮತ್’ (ಗದ್ದೆಯಲ್ಲಿ ಗಮ್ಮತ್) ಎಂಬ ಕಾರ್ಯಕ್ರಮವನ್ನು ಕೆಲರಾಯ್ ತಾರಿಗುಡ್ಡೆ ಗದ್ದೆಯಲ್ಲಿ ಆಯೋಜಿಸಿತ್ತು.


ಬೆಳಿಗ್ಗೆ 9.30 ಗಂಟೆಗೆ ಸಂತ ಅನ್ನಾ ದೇವಾಲಯದ ಧರ್ಮಗುರುಗಳಾದ ಫಾ| ಸಿಲ್ವೆಸ್ಟರ್ ಡಿಕೋಸ್ಟಾರವರು ಆಶೀರ್ವಚನದ ಮೂಲಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಐಸಿವೈಎಮ್ ಸಚೇತಕರಾದ ವಿನೋದ್ ಪಿರೇರಾ, ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಂತೋಷ್ ಡಿಕೋಸ್ಟಾ, ಕಾರ್ಯದರ್ಶಿ ಸೆಲಿನ್ ಡಿಮೆಲ್ಲೊ, ಫಾ| ರೋಶನ್ ಫೆರ್ನಾಂಡಿಸ್, ಕಾರ್ಪರೇಟರ್ ರಘು ಸಾಲಿಯಾನ್, ಜಯಂತಿ ದೇವಸ ಮುಂತಾದ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಪಿಂಗಾರ ಅರಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸರ್ವಧರ್ಮಗಳ ಸಹಕಾರದಿಂದ ಈ ಕಾರ್ಯಕ್ರಮಕ್ಕೆ ಕಳೆಬಂದಿತ್ತು.
ಅನೇಕ ವರ್ಷಗಳಿಂದ ತೆನೆಹಬ್ಬಕ್ಕೆ ತೆನೆಯನ್ನು ದಾನ ಮಾಡುತ್ತಿರುವ ಕೃಷಿಕ ಜ್ಯೂಡ್ ಕರ್ನೆಲಿಯೊ ಇವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ‘ಪೆಪ್ಸಿ ಲಕ್ಕಿ ಡ್ರಾ’ದಲ್ಲಿ ಅನೇಕರು ಭಾಗವಹಿಸಿ ಬಹುಮಾನ ಗೆದ್ದರು. ಸರ್ವರಿಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ಸ್ಪರ್ಧೆಗಳನ್ನು ಬೆಳಿಗ್ಗೆ 10ರಿಂದ ಸಂಜೆ 5 ರ ತನಕ ನಡೆಸಿ, ಸಂಜೆಯ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. ಬಂದಂತಹ ಗಣ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮನೀಶಾ ಡಿಸೋಜಾ ಸ್ವಾಗತಿಸಿ, ಅಲಿಷಾ ಕ್ರಾಸ್ತಾ ಧನ್ಯವಾದ ಸಮರ್ಪಣೆ ಗೈದರು.
ಕಾರ್ಯಕ್ರಮವನ್ನು ಸಂತೋಷ್ ಡಿಕೋಸ್ಟಾ ಹಾಗೂ ಬೆನೊಯ್ ಡಿಸೋಜಾ ನಡೆಸಿಕೊಟ್ಟರು. ಸಣ್ಣ ಮಕ್ಕಳಿಂದ ಹಿಡಿದು ವೃಯೋವೃದ್ಧರವರೆಗೆ ಎಲ್ಲರೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಕೆಸರಿನ ಗದ್ದೆಯಲ್ಲಿ ಆನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು