6:48 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಕೆಲರಾಯ್ ಯಲ್ಲಿ ‘ಗಾದ್ಯಾಂತ್ ಗಮ್ಮತ್’: ಕೃಷಿಕ ಜ್ಯೂಡ್ ಕರ್ನೆಲಿಯೊ ಅವರಿಗೆ ಸನ್ಮಾನ

03/09/2024, 23:24

ಮಂಗಳೂರು(reporterkarnataka.com): ಸಂತ ಅನ್ನಾ ಚರ್ಚ್ ಕೆಲರಾಯ್, ಇಲ್ಲಿನ ‘ಭಾರತೀಯ ಕಥೋಲಿಕ್ ಯುವ ಸಂಚಾಲನ’ವು ಭಾನುವಾರ ‘ಗಾದ್ಯಾಂತ್ ಗಮ್ಮತ್’ (ಗದ್ದೆಯಲ್ಲಿ ಗಮ್ಮತ್) ಎಂಬ ಕಾರ್ಯಕ್ರಮವನ್ನು ಕೆಲರಾಯ್ ತಾರಿಗುಡ್ಡೆ ಗದ್ದೆಯಲ್ಲಿ ಆಯೋಜಿಸಿತ್ತು.


ಬೆಳಿಗ್ಗೆ 9.30 ಗಂಟೆಗೆ ಸಂತ ಅನ್ನಾ ದೇವಾಲಯದ ಧರ್ಮಗುರುಗಳಾದ ಫಾ| ಸಿಲ್ವೆಸ್ಟರ್ ಡಿಕೋಸ್ಟಾರವರು ಆಶೀರ್ವಚನದ ಮೂಲಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಐಸಿವೈಎಮ್ ಸಚೇತಕರಾದ ವಿನೋದ್ ಪಿರೇರಾ, ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಂತೋಷ್ ಡಿಕೋಸ್ಟಾ, ಕಾರ್ಯದರ್ಶಿ ಸೆಲಿನ್ ಡಿಮೆಲ್ಲೊ, ಫಾ| ರೋಶನ್ ಫೆರ್ನಾಂಡಿಸ್, ಕಾರ್ಪರೇಟರ್ ರಘು ಸಾಲಿಯಾನ್, ಜಯಂತಿ ದೇವಸ ಮುಂತಾದ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಪಿಂಗಾರ ಅರಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸರ್ವಧರ್ಮಗಳ ಸಹಕಾರದಿಂದ ಈ ಕಾರ್ಯಕ್ರಮಕ್ಕೆ ಕಳೆಬಂದಿತ್ತು.
ಅನೇಕ ವರ್ಷಗಳಿಂದ ತೆನೆಹಬ್ಬಕ್ಕೆ ತೆನೆಯನ್ನು ದಾನ ಮಾಡುತ್ತಿರುವ ಕೃಷಿಕ ಜ್ಯೂಡ್ ಕರ್ನೆಲಿಯೊ ಇವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ‘ಪೆಪ್ಸಿ ಲಕ್ಕಿ ಡ್ರಾ’ದಲ್ಲಿ ಅನೇಕರು ಭಾಗವಹಿಸಿ ಬಹುಮಾನ ಗೆದ್ದರು. ಸರ್ವರಿಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ಸ್ಪರ್ಧೆಗಳನ್ನು ಬೆಳಿಗ್ಗೆ 10ರಿಂದ ಸಂಜೆ 5 ರ ತನಕ ನಡೆಸಿ, ಸಂಜೆಯ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. ಬಂದಂತಹ ಗಣ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮನೀಶಾ ಡಿಸೋಜಾ ಸ್ವಾಗತಿಸಿ, ಅಲಿಷಾ ಕ್ರಾಸ್ತಾ ಧನ್ಯವಾದ ಸಮರ್ಪಣೆ ಗೈದರು.
ಕಾರ್ಯಕ್ರಮವನ್ನು ಸಂತೋಷ್ ಡಿಕೋಸ್ಟಾ ಹಾಗೂ ಬೆನೊಯ್ ಡಿಸೋಜಾ ನಡೆಸಿಕೊಟ್ಟರು. ಸಣ್ಣ ಮಕ್ಕಳಿಂದ ಹಿಡಿದು ವೃಯೋವೃದ್ಧರವರೆಗೆ ಎಲ್ಲರೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಕೆಸರಿನ ಗದ್ದೆಯಲ್ಲಿ ಆನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು