4:41 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಖೇಲೋ ಇಂಡಿಯಾ ಕ್ರೀಡಾಕೂಟ: ಹರಿಯಾಣ ಪ್ರಥಮ; ಕರ್ನಾಟಕಕ್ಕೆ 3ನೇ ಸ್ಥಾನ

14/06/2022, 11:51

ಹೊಸದಿಲ್ಲಿ(reporterkarnataka.com): ಹರಿಯಾಣದಲ್ಲಿ ನಡೆದ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಕರ್ನಾಟಕ 3ನೇ ಸ್ಥಾನ ಪಡೆಯಿತು. 22 ಚಿನ್ನ, 17 ಬೆಳ್ಳಿ, 28 ಕಂಚು ಸೇರಿದಂತೆ ಒಟ್ಟು 67 ಪದಕಗಳನ್ನು ರಾಜ್ಯದ ಕ್ರೀಡಾಪಟುಗಳು ಗೆದ್ದಿದ್ದಾರೆ.

ಈಜು, ಕುಸ್ತಿ, ಕಬ್ಬಡ್ಡಿ, ಖೋ ಖೋ, ಬ್ಯಾಡ್ಮಿಂಟನ್​, ಟ್ರ್ಯಾಕ್​ ರನ್ನಿಂಗ್​ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಕರ್ನಾಟಕದ ಆಟಗಾರರು ಪಾರಮ್ಯ ಮೆರೆದಿದ್ದಾರೆ. ರಾಜ್ಯದ ಖ್ಯಾತ ಕ್ರೀಡೆಯಾದ ಮಲ್ಲಗಂಬದಲ್ಲಿ ತಂಡ ಚಿನ್ನದ ಸಾಧನೆ ಮಾಡಿದೆ.

ಕರ್ನಾಟಕ ತಂಡದಲ್ಲಿ 84 ಪುರುಷರು, 110 ಮಹಿಳೆಯರು ಸೇರಿ 194 ಕ್ರೀಡಾಪಟುಗಳು ಭಾಗವಹಿಸಿದ್ದರು.

ಹರಿಯಾಣ ಪ್ರಥಮ ಸಾಧನೆ: ಹರಿಯಾಣ ಕ್ರೀಡಾಪಟುಗಳು 137 ಪದಕ ಸಾಧನೆ ಮಾಡಿದ್ದು, ಇದರಲ್ಲಿ 52 ಚಿನ್ನ, 39 ಬೆಳ್ಳಿ, 46 ಕಂಚಿನ ಪದಕಗಳು ಸೇರಿವೆ. ಈ ಮೂಲಕ ಕ್ರೀಡಾಕೂಟದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಮಹಾರಾಷ್ಟ್ರ 125 ಪದಕಗಳ ಸಮೇತ 2ನೇ ಸ್ಥಾನ ಪಡೆದಿದ್ದು, 45+40+40 ಸಾಧನೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು