12:54 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಖೇಲೋ ಇಂಡಿಯಾ ಕ್ರೀಡಾಕೂಟ: ಹರಿಯಾಣ ಪ್ರಥಮ; ಕರ್ನಾಟಕಕ್ಕೆ 3ನೇ ಸ್ಥಾನ

14/06/2022, 11:51

ಹೊಸದಿಲ್ಲಿ(reporterkarnataka.com): ಹರಿಯಾಣದಲ್ಲಿ ನಡೆದ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಕರ್ನಾಟಕ 3ನೇ ಸ್ಥಾನ ಪಡೆಯಿತು. 22 ಚಿನ್ನ, 17 ಬೆಳ್ಳಿ, 28 ಕಂಚು ಸೇರಿದಂತೆ ಒಟ್ಟು 67 ಪದಕಗಳನ್ನು ರಾಜ್ಯದ ಕ್ರೀಡಾಪಟುಗಳು ಗೆದ್ದಿದ್ದಾರೆ.

ಈಜು, ಕುಸ್ತಿ, ಕಬ್ಬಡ್ಡಿ, ಖೋ ಖೋ, ಬ್ಯಾಡ್ಮಿಂಟನ್​, ಟ್ರ್ಯಾಕ್​ ರನ್ನಿಂಗ್​ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಕರ್ನಾಟಕದ ಆಟಗಾರರು ಪಾರಮ್ಯ ಮೆರೆದಿದ್ದಾರೆ. ರಾಜ್ಯದ ಖ್ಯಾತ ಕ್ರೀಡೆಯಾದ ಮಲ್ಲಗಂಬದಲ್ಲಿ ತಂಡ ಚಿನ್ನದ ಸಾಧನೆ ಮಾಡಿದೆ.

ಕರ್ನಾಟಕ ತಂಡದಲ್ಲಿ 84 ಪುರುಷರು, 110 ಮಹಿಳೆಯರು ಸೇರಿ 194 ಕ್ರೀಡಾಪಟುಗಳು ಭಾಗವಹಿಸಿದ್ದರು.

ಹರಿಯಾಣ ಪ್ರಥಮ ಸಾಧನೆ: ಹರಿಯಾಣ ಕ್ರೀಡಾಪಟುಗಳು 137 ಪದಕ ಸಾಧನೆ ಮಾಡಿದ್ದು, ಇದರಲ್ಲಿ 52 ಚಿನ್ನ, 39 ಬೆಳ್ಳಿ, 46 ಕಂಚಿನ ಪದಕಗಳು ಸೇರಿವೆ. ಈ ಮೂಲಕ ಕ್ರೀಡಾಕೂಟದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಮಹಾರಾಷ್ಟ್ರ 125 ಪದಕಗಳ ಸಮೇತ 2ನೇ ಸ್ಥಾನ ಪಡೆದಿದ್ದು, 45+40+40 ಸಾಧನೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು