10:14 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಖೇಲೋ ಇಂಡಿಯಾ ಕ್ರೀಡಾಕೂಟ: ಹರಿಯಾಣ ಪ್ರಥಮ; ಕರ್ನಾಟಕಕ್ಕೆ 3ನೇ ಸ್ಥಾನ

14/06/2022, 11:51

ಹೊಸದಿಲ್ಲಿ(reporterkarnataka.com): ಹರಿಯಾಣದಲ್ಲಿ ನಡೆದ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಕರ್ನಾಟಕ 3ನೇ ಸ್ಥಾನ ಪಡೆಯಿತು. 22 ಚಿನ್ನ, 17 ಬೆಳ್ಳಿ, 28 ಕಂಚು ಸೇರಿದಂತೆ ಒಟ್ಟು 67 ಪದಕಗಳನ್ನು ರಾಜ್ಯದ ಕ್ರೀಡಾಪಟುಗಳು ಗೆದ್ದಿದ್ದಾರೆ.

ಈಜು, ಕುಸ್ತಿ, ಕಬ್ಬಡ್ಡಿ, ಖೋ ಖೋ, ಬ್ಯಾಡ್ಮಿಂಟನ್​, ಟ್ರ್ಯಾಕ್​ ರನ್ನಿಂಗ್​ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಕರ್ನಾಟಕದ ಆಟಗಾರರು ಪಾರಮ್ಯ ಮೆರೆದಿದ್ದಾರೆ. ರಾಜ್ಯದ ಖ್ಯಾತ ಕ್ರೀಡೆಯಾದ ಮಲ್ಲಗಂಬದಲ್ಲಿ ತಂಡ ಚಿನ್ನದ ಸಾಧನೆ ಮಾಡಿದೆ.

ಕರ್ನಾಟಕ ತಂಡದಲ್ಲಿ 84 ಪುರುಷರು, 110 ಮಹಿಳೆಯರು ಸೇರಿ 194 ಕ್ರೀಡಾಪಟುಗಳು ಭಾಗವಹಿಸಿದ್ದರು.

ಹರಿಯಾಣ ಪ್ರಥಮ ಸಾಧನೆ: ಹರಿಯಾಣ ಕ್ರೀಡಾಪಟುಗಳು 137 ಪದಕ ಸಾಧನೆ ಮಾಡಿದ್ದು, ಇದರಲ್ಲಿ 52 ಚಿನ್ನ, 39 ಬೆಳ್ಳಿ, 46 ಕಂಚಿನ ಪದಕಗಳು ಸೇರಿವೆ. ಈ ಮೂಲಕ ಕ್ರೀಡಾಕೂಟದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಮಹಾರಾಷ್ಟ್ರ 125 ಪದಕಗಳ ಸಮೇತ 2ನೇ ಸ್ಥಾನ ಪಡೆದಿದ್ದು, 45+40+40 ಸಾಧನೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು