11:18 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ: ವಿಧಾನ ಪರಿಷತ್ತು ಸಭಾಪತಿ ಹೊರಟ್ಟಿ ಅವರಿಂದ ಗೌರವಪೂರ್ಣ ನಮನ

27/06/2025, 21:29

ಬೆಂಗಳೂರು(reporterkarnataka.com): ಸರ್ವಶ್ರೇಷ್ಠ ದಾರ್ಶನಿಕ, ಅಪ್ರತಿಮ ಆಡಳಿತಗಾರ, ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಅವರ ದೂರದೃಷ್ಟಿಯುಳ್ಳ ಕ್ರಾಂತಿಕಾರಕ ಆಡಳಿತ ವೈಖರಿಯಿಂದ ಇಂದು ಬೆಂಗಳೂರು ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸಂದೇಶದಲ್ಲಿ ಬಣ್ಣಿಸಿದ್ದಾರೆ.
ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಉತ್ಸವದ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ಹಂಪಿಯ ವೈಭವ ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಟಿಯಿಂದ ನಿರ್ಮಿಸಿರುವ ಬೆಂಗಳೂರು ನಗರ ಇಂದು ಬಹುವಾಗಿ ಬೆಳೆದು ಜಾಗತಿಕ ನಕ್ಷೆಯಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ. ಕೆಂಪೇಗೌಡರು ನಿರ್ಮಿಸಿರುವ ಕೆರೆಗಳು, ದೇವಾಲಯಗಳು, ಕೋಟೆ ಕೊತ್ತಲಗಳು ಇಂದಿಗೂ ನಮ್ಮ ಕಣ್ಣ ಮುಂದಿವೆ. ಬೆಂದಕಾಳೂರು ಎಂಬ ನಾಮದಿಂದ ಕರೆಯುತ್ತಿದ್ದ ನಗರ ಇಂದು ಬೆಂಗಳೂರು ನಗರವಾಗಿ ರೂಪುಗೊಂಡಿದ್ದು, ಕೆಂಪೇಗೌಡರ ದೂರದೃಷ್ಟಿಯ ಫಲ ಎಂದು ಶ್ರೀ ಬಸವರಾಜ ಹೊರಟ್ಟಿ ಅಭಿಮಾನದಿಂದ ತಿಳಿಸಿದರು.
ಕೆಂಪೇಗೌಡರ ಬದುಕು, ಹೋರಾಟ ಅವರ ದೂರದೃಷ್ಟಿಯುಳ್ಳ ಪರಿಣಾಮಕಾರಿ ಆಡಳಿತ ಇಂದಿಗೂ ನಮ್ಮೆಲ್ಲರಿಗೂ ಪ್ರೇರಣೆಯಾಗಿದೆ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಹ ಕೆಂಪೇಗೌಡರ ಅನುಯಾಯಿಯಾಗಿದ್ದು, ಅವರಿಂದ ಪ್ರೇರಣೆ ಪಡೆದು ಕೆಂಪೇಗೌಡರ ಕನಸಿನ ಬೆಂಗಳೂರು ನಗರದ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಶ್ಲಾಘನೀಯ, ಕೆಂಪೇಗೌಡರ ಹೆಸರನ್ನು ಸ್ವತಃ ತಮ್ಮ ಮಗನಿಗೆ ನಾಮಕರಣ ಮಾಡಿರುವ ಡಿ.ಕೆ. ಶಿವಕುಮಾರ್, ಕೆಂಪೇಗೌಡರ ಬಗೆಗೆ ತಮಗಿರುವ ಭಕ್ತಿ, ಶ್ರದ್ದೆ ಹಾಗೂ ಬದ್ಧತೆಯನ್ನು ಸಾಕ್ಷೀಕರಿಸಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಭಿಮಾನ ವ್ಯಕ್ತಪಡಿಸಿದರು.
ಸಾವಿರ ಕೆರೆಗಳ ನಾಡು ಎಂದು ಖ್ಯಾತಿ ಪಡೆದಿರುವ ಬೆಂಗಳೂರನ್ನು ವ್ಯವಸ್ಥಿತ ನಗರವನ್ನಾಗಿ ಬೆಳೆಸುವ ಕನಸು ಹೊತ್ತಿದ್ದ ಕೆಂಪೇಗೌಡರ ದೂರದರ್ಶಿತ್ವ ಇಂದು ನಮಗೆಲ್ಲರಿಗೂ ಮೇಲ್ಪಂಕ್ತಿಯಾಗಿದ್ದು ಕೆಂಪೇಗೌಡರ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿರುವುದು ಇಂದಿನ ತುರ್ತು ಅಗತ್ಯವಾಗಿದೆ, ಬೆಂಗಳೂರಿನ ಸೌಂದರ್ಯವನ್ನು ಉಳಿಸಿ ಅಚ್ಚುಕಟ್ಟಾಗಿ ಬೆಳೆಸುವ ಮೂಲಕ ಕೆಂಪೇಗೌಡರ ಕನಸನ್ನು ನನಸನ್ನಾಗಿಸುವುದು ನಾವೆಲ್ಲರೂ ನಾಡಪ್ರಭುಗಳಿಗೆ ಸಲ್ಲಿಸುವ ನೈಜ ಗೌರವವಾಗಿದೆ. ಈ ನಿಟ್ಟಿನಲ್ಲಿ ಇಂದಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಮುಂದಡಿ ಇಟ್ಟಿದ್ದಾರೆ ಎನ್ನುವ ವಿಶ್ವಾಸ ನನ್ನದಾಗಿದೆ ಎಂದು ಬಸವರಾಜ ಹೊರಟ್ಟಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು