9:46 PM Friday27 - June 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ… BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್… ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಅತ್ಯಾಧುನಿಕ ಭೂಗತ ರಸ್ತೆ ಜಾಲ, ಪೆರಿಫೆರಲ್ ರಿಂಗ್ ರಸ್ತೆ: ಹೆದ್ದಾರಿ ಸಚಿವ… ಎನ್.ಆರ್.ಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು;… Chikkamagaluru | ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ: ಸವಾರ… ಬಾಣಸವಾಡಿ, ಕಸ್ತೂರಿನಗರ ಅರಣ್ಯ ಪ್ರದೇಶಕ್ಕೆ ಸಚಿವ ಖಂಡ್ರೆ ಭೇಟಿ: ಬೆಂಗಳೂರಿನಲ್ಲಿ ಶ್ವಾಸತಾಣಗಳ ಸಂರಕ್ಷಣೆ… HDK | ವಸತಿ ಇಲಾಖೆ ಅಕ್ರಮ ಮರೆಮಾಚಲು ಎಚ್.ಕೆ. ಪಾಟೀಲ್ ಪತ್ರ ತೇಲಿ…

ಇತ್ತೀಚಿನ ಸುದ್ದಿ

ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ: ವಿಧಾನ ಪರಿಷತ್ತು ಸಭಾಪತಿ ಹೊರಟ್ಟಿ ಅವರಿಂದ ಗೌರವಪೂರ್ಣ ನಮನ

27/06/2025, 21:29

ಬೆಂಗಳೂರು(reporterkarnataka.com): ಸರ್ವಶ್ರೇಷ್ಠ ದಾರ್ಶನಿಕ, ಅಪ್ರತಿಮ ಆಡಳಿತಗಾರ, ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಅವರ ದೂರದೃಷ್ಟಿಯುಳ್ಳ ಕ್ರಾಂತಿಕಾರಕ ಆಡಳಿತ ವೈಖರಿಯಿಂದ ಇಂದು ಬೆಂಗಳೂರು ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸಂದೇಶದಲ್ಲಿ ಬಣ್ಣಿಸಿದ್ದಾರೆ.
ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಉತ್ಸವದ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ಹಂಪಿಯ ವೈಭವ ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಟಿಯಿಂದ ನಿರ್ಮಿಸಿರುವ ಬೆಂಗಳೂರು ನಗರ ಇಂದು ಬಹುವಾಗಿ ಬೆಳೆದು ಜಾಗತಿಕ ನಕ್ಷೆಯಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ. ಕೆಂಪೇಗೌಡರು ನಿರ್ಮಿಸಿರುವ ಕೆರೆಗಳು, ದೇವಾಲಯಗಳು, ಕೋಟೆ ಕೊತ್ತಲಗಳು ಇಂದಿಗೂ ನಮ್ಮ ಕಣ್ಣ ಮುಂದಿವೆ. ಬೆಂದಕಾಳೂರು ಎಂಬ ನಾಮದಿಂದ ಕರೆಯುತ್ತಿದ್ದ ನಗರ ಇಂದು ಬೆಂಗಳೂರು ನಗರವಾಗಿ ರೂಪುಗೊಂಡಿದ್ದು, ಕೆಂಪೇಗೌಡರ ದೂರದೃಷ್ಟಿಯ ಫಲ ಎಂದು ಶ್ರೀ ಬಸವರಾಜ ಹೊರಟ್ಟಿ ಅಭಿಮಾನದಿಂದ ತಿಳಿಸಿದರು.
ಕೆಂಪೇಗೌಡರ ಬದುಕು, ಹೋರಾಟ ಅವರ ದೂರದೃಷ್ಟಿಯುಳ್ಳ ಪರಿಣಾಮಕಾರಿ ಆಡಳಿತ ಇಂದಿಗೂ ನಮ್ಮೆಲ್ಲರಿಗೂ ಪ್ರೇರಣೆಯಾಗಿದೆ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಹ ಕೆಂಪೇಗೌಡರ ಅನುಯಾಯಿಯಾಗಿದ್ದು, ಅವರಿಂದ ಪ್ರೇರಣೆ ಪಡೆದು ಕೆಂಪೇಗೌಡರ ಕನಸಿನ ಬೆಂಗಳೂರು ನಗರದ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಶ್ಲಾಘನೀಯ, ಕೆಂಪೇಗೌಡರ ಹೆಸರನ್ನು ಸ್ವತಃ ತಮ್ಮ ಮಗನಿಗೆ ನಾಮಕರಣ ಮಾಡಿರುವ ಡಿ.ಕೆ. ಶಿವಕುಮಾರ್, ಕೆಂಪೇಗೌಡರ ಬಗೆಗೆ ತಮಗಿರುವ ಭಕ್ತಿ, ಶ್ರದ್ದೆ ಹಾಗೂ ಬದ್ಧತೆಯನ್ನು ಸಾಕ್ಷೀಕರಿಸಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಭಿಮಾನ ವ್ಯಕ್ತಪಡಿಸಿದರು.
ಸಾವಿರ ಕೆರೆಗಳ ನಾಡು ಎಂದು ಖ್ಯಾತಿ ಪಡೆದಿರುವ ಬೆಂಗಳೂರನ್ನು ವ್ಯವಸ್ಥಿತ ನಗರವನ್ನಾಗಿ ಬೆಳೆಸುವ ಕನಸು ಹೊತ್ತಿದ್ದ ಕೆಂಪೇಗೌಡರ ದೂರದರ್ಶಿತ್ವ ಇಂದು ನಮಗೆಲ್ಲರಿಗೂ ಮೇಲ್ಪಂಕ್ತಿಯಾಗಿದ್ದು ಕೆಂಪೇಗೌಡರ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿರುವುದು ಇಂದಿನ ತುರ್ತು ಅಗತ್ಯವಾಗಿದೆ, ಬೆಂಗಳೂರಿನ ಸೌಂದರ್ಯವನ್ನು ಉಳಿಸಿ ಅಚ್ಚುಕಟ್ಟಾಗಿ ಬೆಳೆಸುವ ಮೂಲಕ ಕೆಂಪೇಗೌಡರ ಕನಸನ್ನು ನನಸನ್ನಾಗಿಸುವುದು ನಾವೆಲ್ಲರೂ ನಾಡಪ್ರಭುಗಳಿಗೆ ಸಲ್ಲಿಸುವ ನೈಜ ಗೌರವವಾಗಿದೆ. ಈ ನಿಟ್ಟಿನಲ್ಲಿ ಇಂದಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಮುಂದಡಿ ಇಟ್ಟಿದ್ದಾರೆ ಎನ್ನುವ ವಿಶ್ವಾಸ ನನ್ನದಾಗಿದೆ ಎಂದು ಬಸವರಾಜ ಹೊರಟ್ಟಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು