7:49 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯಕ್ಕೆ ಭೂಮಿ ಮಂಜೂರು; ಕಂದಾಯ ಸಚಿವರೊಂದಿಗೆ ಸಮಾಲೋಚನಾ ಸಭೆ

27/06/2025, 21:41

ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು.


ಇಂದು ಜಾಗೃತ ಕರ್ನಾಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದ ಪ್ರತಿನಿಧಿಗಳು ಮತ್ತು ತುಮಕೂರಿನ ಅಲೆಮಾರಿ ಸಮುದಾಯದ ಪ್ರತಿನಿಧಿಗಳ ನಿಯೋಗದೊಂದಿಗೆ ಸಚಿವರಾದ ಕೃಷ್ಣಬೈರೇಗೌಡರೊಂದಿಗೆ ಸಭೆ ಏರ್ಪಡಿಸಲಾಗಿತ್ತು.
ಕೊರಗ ಸಮುದಾಯದವರಿಗೆ ನೀಡಲೆಂದು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಗುರುತಿಸಿರುವ ಕೃಷಿ ಯೋಗ್ಯ ಭೂಮಿಯನ್ನು ಶೀಘ್ರವಾಗಿ ಮಂಜೂರು ಮಾಡುವಂತೆ ಕೊರಗ ಸಂಘದ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರ ಮುಂದೆ ತಮ್ಮ ಅಹವಾಲನ್ನು ಸಲ್ಲಿಸಿದರು.
ಉಡುಪಿ ಜಿಲ್ಲೆಯಲ್ಲಿ ಕೊರಗ ಸಮುದಾಯದವರಿಗೆ ಕೃಷಿ ಭೂಮಿಯ ಹಂಚಿಕೆ ಉತ್ತಮ ರೀತಿಯಲ್ಲಿ ನಡೆದಿದ್ದು, ಅದೇ ಮಾದರಿಯನ್ನು ದಕ್ಷಿಣ ಕನ್ನಡದಲ್ಲೂ ಅನುಸರಿಸುವಂತೆ ಕೊರಗ ಸಂಘದ ಪ್ರತಿನಿಧಿಗಳು ಸಚಿವರಲ್ಲಿ ಮನವಿ ಮಾಡಿದರು.
ಸಮುದಾಯದ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಈ ಹಿಂದೆ ಕೊರಗ ಸಮುದಾಯಕ್ಕೆ ಕೃಷಿ ಭೂಮಿ ಮಂಜೂರು ಮಾಡಿದ ಪ್ರಕ್ರಿಯೆಗಳನ್ನು ಜಿಲ್ಲಾಡಳಿತದೊಂದಿಗೆ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚಲೋಚನೆ ನಡೆಸಿ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಅತೀ ಸೂಕ್ಷ್ಮ ಹಾಗೂ ಅತೀ ಹಿಂದುಳಿದಿರುವ ಪರಿಶಿಷ್ಟ ಪಂಗಡದ ಸಮುದಾಯವಾಗಿರುವ ಕೊರಗರು ಗುಂಪು ಗುಂಪಾಗಿ ವಾಸಿಸುವ ಹಿನ್ನೆಲೆಯವರಾಗಿದ್ದು, ಕನಿಷ್ಠ 10 ರಿಂದ 15 ಕುಟುಂಬಗಳಿಗೆ ಒಟ್ಟೊಟ್ಟಿಗೆ ಯಾಗಿ ಭೂಮಿ ಮಂಜೂರು ಮಾಡಿದರೆ ತಮ್ಮ ಹಿಂದಿನ ಸಮುದಾಯ ಪರಿಕಲ್ಪನೆಯಂತೆ ಕೊರಗರು ಸ್ವತಂತ್ರವಾಗಿ ಬದುಕಿ ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ದ.ಕ. ಜಿಲ್ಲಾ ಕೊರಗ ಸಂಘದ ಅಧ್ಯಕ್ಷ ಸುಂದರ ಬೆಳವಾಯಿ ಅವರು ಸಭೆಯಲ್ಲಿ ಮನವಿ ಮಾಡಿದರು.
ಕಾನೂನು ವ್ಯಾಪ್ತಿಯಲ್ಲಿ ಸಾಧ್ಯವಿರುವ ಎಲ್ಲ ಪ್ರಯತ್ನವನ್ನು ಪ್ರಾಮಾಣಿಕವಾಗಿ ನಡೆಸುವುದಾಗಿ ಸಚಿವ ಕೃಷ್ಣ ಬೈರೇಗೌಡ ನಿಯೋಗಕ್ಕೆ ಭರವಸೆ ನೀಡಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಕೊರಗ ಸಮುದಾಯದ ಹಿನ್ನೆಲೆ ಹಾಗೂ ಪ್ರಸ್ತುತ ಕೊರಗ ಸಮುದಾಯದ ಸ್ಥಿತಿಗತಿಯ ಬಗ್ಗೆ ಸಭೆಗೆ ವಿವರ ನೀಡಿದರು.
ಸಮಾಲೋಚನಾ ಸಭೆಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು. ಎಚ್, ದ.ಕ ಜಿಲ್ಲಾ ಕೊರಗರ ಸಂಘದ ಅಧ್ಯಕ್ಷ ಸುಂದರ ಬೆಳುವಾಯಿ, ಉಪಾಧ್ಯಕ್ಷ ಕೊಗ್ಗ ರಮೇಶ್, ಪ್ರಧಾನ ಕಾರ್ಯದರ್ಶಿ ಶಶಿಕಲಾ, ಪದಾಧಿಕಾರಿಗಳಾದ ಸಂಜೀವ ಕೊಡಿಕಲ್, ಕಮಲ ಮೊಂಟೆಪದವು, ಜಾಗೃತ ಕರ್ನಾಟಕದ ರಾಜ್ಯ ಸಮಿತಿ ಸದಸ್ಯರಾದ ಬಿ.ಸಿ ಬಸವರಾಜ್, ಲಕ್ಷ್ಮಣ್ ಕುಂದರ್, ಡಾ.ವಾಸು ಎಚ್.ವಿ, ದೊಡ್ಡಿಪಾಳ್ಯ ನರಸಿಂಹಮೂರ್ತಿ ಸೇರಿ ಇತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು