11:44 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕೆಂಪು ಕುಚಲಕ್ಕಿ ಬೇಡಿಕೆ: ದ.ಕ., ಉಡುಪಿ ಜಿಲ್ಲೆಗೆ ವಾರ್ಷಿಕ ಬೇಕು 12 ಲಕ್ಷ ಕ್ವಿಂಟಾಲ್ ; ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ನಿರ್ಧಾರ

28/05/2021, 07:39

ಬೆಂಗಳೂರು(reporterkarnataka news) : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಕುಚಲಕ್ಕಿ ವಿತರಿಸಲು ಕೇಂದ್ರ ಸರಕಾರದಿಂದ ಅನುಮತಿ ಪಡೆಯಲು ಪ್ರಸ್ತಾಪನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.

ಉಭಯ ಜಿಲ್ಲೆಗಳಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದಿದೆ. 

ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಬತ್ತದ ತಳಿಗಳಾದ ಎಂ ಒ 4, ಜಯ, ಅಭಿಲಾಷ, ಭದ್ರ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಕೇಂದ್ರ ಸರ್ಕಾರದ ಅನುಮತಿಗಾಗಿ ಸಭೆ ನಡೆಯಿತು. ಸುದೀರ್ಘ ಚರ್ಚೆಯ ಬಳಿಕ ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ತಾವನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು