2:31 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕೆಂಪು ಕುಚಲಕ್ಕಿ ಬೇಡಿಕೆ: ದ.ಕ., ಉಡುಪಿ ಜಿಲ್ಲೆಗೆ ವಾರ್ಷಿಕ ಬೇಕು 12 ಲಕ್ಷ ಕ್ವಿಂಟಾಲ್ ; ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ನಿರ್ಧಾರ

28/05/2021, 07:39

ಬೆಂಗಳೂರು(reporterkarnataka news) : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಕುಚಲಕ್ಕಿ ವಿತರಿಸಲು ಕೇಂದ್ರ ಸರಕಾರದಿಂದ ಅನುಮತಿ ಪಡೆಯಲು ಪ್ರಸ್ತಾಪನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.

ಉಭಯ ಜಿಲ್ಲೆಗಳಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದಿದೆ. 

ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಬತ್ತದ ತಳಿಗಳಾದ ಎಂ ಒ 4, ಜಯ, ಅಭಿಲಾಷ, ಭದ್ರ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಕೇಂದ್ರ ಸರ್ಕಾರದ ಅನುಮತಿಗಾಗಿ ಸಭೆ ನಡೆಯಿತು. ಸುದೀರ್ಘ ಚರ್ಚೆಯ ಬಳಿಕ ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ತಾವನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು