5:41 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು: ಮಾತೃಭಾಷೆಯಲ್ಲಿ ಮಾತನಾಡಿದ ಅಪ್ಪಟ ಕನ್ನಡಿಗ ಚಂದ್ರ ಆರ್ಯ

20/05/2022, 16:18

ಒಟ್ಟಾವ(reporterkarnataka.com): ಕೆನಡಾದ ಸಂಸತ್ತಿನಲ್ಲಿ ಕನ್ನಡದ ಧ್ವನಿ ಮೊಳಗಿದೆ. ಕೆನಡಾ ಸಂಸತ್ತಿನ ಸದಸ್ಯನಾಗಿ ಆಯ್ಕೆಯಾದ ಅಪ್ಪಟ ಕನ್ನಡಿಗರೊಬ್ಬರು ಸಂಸತ್ತಿನಲ್ಲಿ ಕನ್ನಡ ಮಾತನಾಡುವ ಮೂಲಕ ಇಡೀ ವಿಶ್ವ ಬೆರಗು ಆಗುವಂತೆ ಮಾಡಿದ್ದಾರೆ.

ನೆಪಿಯನ್ ಕ್ಷೇತ್ರದ ಪ್ರತಿನಿಧಿ, ರಾಜ್ಯಸಭೆ ಸದಸ್ಯರಾದ ಕನ್ನಡಿಗ ಚಂದ್ರ ಆರ್ಯ ಅವರು ಕನ್ನಡದಲ್ಲಿ ಮಾತನಾಡಿದರು. ಸ್ಪೀಕರ್ ಅವರ ಪೂರ್ವಾನುಮತಿ ಪಡೆದು ಅವರು ಸಂಸತ್ತನ್ನುದ್ದೇಶಿ ಮಾತನಾಡಿದರು. ರಾಷ್ಟ ಕವಿ ಕುವೆಂಪು ಅವರ ಎಲ್ಲದರು ಇರು,ಎಂಥಾದರು ಇರು, ಎಂದೆಂದಿಗೂ ನೀನು ಕನ್ನಡವಾಗಿರುವ ಕವನಗಳ ಸಾಲುಗಳನ್ನು ಉದ್ಘರಿಸುವ ಮೂಲಕ ಅವರು ಮಾತು ಮುಗಿಸಿದರು.

ನಮ್ಮ ದೇಶದ ಸಂಸತ್ತಿನಿಂದ ಮತ್ತು ರಾಜಕೀಯ‌ದಿಂದ ದೇಶಭಾಷೆಗಳನ್ನು ಕಣ್ಮರೆಯಾಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಕೆನಡಾ ಸಂಸತ್ತಿನಲ್ಲಿ ಚಂದ್ರ ಆರ್ಯ ಅವರು ಕನ್ನಡದ ಕಂಪು ಬೀರಿದ್ದಾರೆ.

ಚಂದ್ರ ಆರ್ಯ ಅವರು ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರು. ತಾಯಿನುಡಿಯ ಕುರಿತು ಅವರ ಕಾಳಜಿ, ಪ್ರೀತಿ ಉತ್ಸಾಹ ನಿಜಕ್ಕೂ ಅನುಕರಣೀಯ.

ಇತ್ತೀಚಿನ ಸುದ್ದಿ

ಜಾಹೀರಾತು