11:11 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು: ಮಾತೃಭಾಷೆಯಲ್ಲಿ ಮಾತನಾಡಿದ ಅಪ್ಪಟ ಕನ್ನಡಿಗ ಚಂದ್ರ ಆರ್ಯ

20/05/2022, 16:18

ಒಟ್ಟಾವ(reporterkarnataka.com): ಕೆನಡಾದ ಸಂಸತ್ತಿನಲ್ಲಿ ಕನ್ನಡದ ಧ್ವನಿ ಮೊಳಗಿದೆ. ಕೆನಡಾ ಸಂಸತ್ತಿನ ಸದಸ್ಯನಾಗಿ ಆಯ್ಕೆಯಾದ ಅಪ್ಪಟ ಕನ್ನಡಿಗರೊಬ್ಬರು ಸಂಸತ್ತಿನಲ್ಲಿ ಕನ್ನಡ ಮಾತನಾಡುವ ಮೂಲಕ ಇಡೀ ವಿಶ್ವ ಬೆರಗು ಆಗುವಂತೆ ಮಾಡಿದ್ದಾರೆ.

ನೆಪಿಯನ್ ಕ್ಷೇತ್ರದ ಪ್ರತಿನಿಧಿ, ರಾಜ್ಯಸಭೆ ಸದಸ್ಯರಾದ ಕನ್ನಡಿಗ ಚಂದ್ರ ಆರ್ಯ ಅವರು ಕನ್ನಡದಲ್ಲಿ ಮಾತನಾಡಿದರು. ಸ್ಪೀಕರ್ ಅವರ ಪೂರ್ವಾನುಮತಿ ಪಡೆದು ಅವರು ಸಂಸತ್ತನ್ನುದ್ದೇಶಿ ಮಾತನಾಡಿದರು. ರಾಷ್ಟ ಕವಿ ಕುವೆಂಪು ಅವರ ಎಲ್ಲದರು ಇರು,ಎಂಥಾದರು ಇರು, ಎಂದೆಂದಿಗೂ ನೀನು ಕನ್ನಡವಾಗಿರುವ ಕವನಗಳ ಸಾಲುಗಳನ್ನು ಉದ್ಘರಿಸುವ ಮೂಲಕ ಅವರು ಮಾತು ಮುಗಿಸಿದರು.

ನಮ್ಮ ದೇಶದ ಸಂಸತ್ತಿನಿಂದ ಮತ್ತು ರಾಜಕೀಯ‌ದಿಂದ ದೇಶಭಾಷೆಗಳನ್ನು ಕಣ್ಮರೆಯಾಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಕೆನಡಾ ಸಂಸತ್ತಿನಲ್ಲಿ ಚಂದ್ರ ಆರ್ಯ ಅವರು ಕನ್ನಡದ ಕಂಪು ಬೀರಿದ್ದಾರೆ.

ಚಂದ್ರ ಆರ್ಯ ಅವರು ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರು. ತಾಯಿನುಡಿಯ ಕುರಿತು ಅವರ ಕಾಳಜಿ, ಪ್ರೀತಿ ಉತ್ಸಾಹ ನಿಜಕ್ಕೂ ಅನುಕರಣೀಯ.

ಇತ್ತೀಚಿನ ಸುದ್ದಿ

ಜಾಹೀರಾತು