1:47 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕೇಂದ್ರ ಬಿಜೆಪಿ ಸರಕಾರ ಹಿಂದುತ್ವ ನೀತಿಯನ್ನು ಗಾಳಿಗೆ ತೂರಿದೆ: ಡಾ. ಸುಬ್ರಮಣಿಯನ್ ಸ್ವಾಮಿ ಆರೋಪ

08/12/2021, 15:50

ಮಂಗಳೂರು(reporterkarnataka.com): ರಾಮ ಸೇತುವೆಯನ್ನು ಉಳಿಸಲು ನಾನು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ವಿರುದ್ಧ ಹೋರಾಟ ನಡೆಸಿದ್ದೆ. ಆದರೆ ಮೋದಿ ಸರಕಾರ ಅದನ್ನು ಪಾರಂಪರಿಕ ಸ್ಮಾರಕ ಎಂದು ಗುರುತಿಸಲು ವಿಫಲವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ತನ್ನದೇ ಆದ ಆರ್ಥಿಕ ಹಾಗೂ ಹಿಂದುತ್ವ ನೀತಿಯನ್ನು ಗಾಳಿಗೆ ತೂರಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ರಾಜ್ಯಸಭೆ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಹೇಳಿದರು.


ಮಂಗಳವಾರ ರಾತ್ರಿ ನಗರಕ್ಕೆ ಆಗಮಿಸಿದ ಅವರು ಮಾಧ್ಯಮ ಜತೆ ಮಾತನಾಡಿ, ನಾನು ಬಿಜೆಪಿಯಲ್ಲಿ ತೃಪ್ತನಾಗಿದ್ದೇನೆ. ಆದರೆ ಕೇಂದ್ರ ಸರಕಾರದ ಕೆಲವು ನೀತಿಗಳ ಬಗ್ಗೆ ನನ್ನ ವಿರೋಧವಿದೆ. ಪ್ರಧಾನಿ ಮೋದಿ ತನ್ನ ನೀತಿಯನ್ನು ಸರಿಪಡಿಸಿಕೊಂಡರೆ ನನ್ನ ವಿರೋಧವೇನೂ ಇಲ್ಲ ಎಂದರು.

ಬಿಜೆಪಿ ಸರಕಾರದ ಬಗ್ಗೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೀಗ ಬಿಜೆಪಿ ತನ್ನ ಪ್ರಣಾಳಿಕೆಯನ್ನೇ ಮರೆತಿದೆ. ಹಿಂದುತ್ವ ನೀತಿ, ವಿದೇಶಿ ನೀತಿ, ಆರ್ಥಿಕ ನೀತಿಯನ್ನು ಮರೆತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಧ್ವನಿ ಎತ್ತುತ್ತಿದ್ದೇನೆ ಎಂದು ಅವರು ನುಡಿದರು.

ಡಾ. ಸುಬ್ರಮಣಿಯನ್ ಸ್ವಾಮಿ ಅವರು ಈ ಸಂದರ್ಭದಲ್ಲಿ ಪತ್ನಿ ಜತೆ ಪ್ರಸಿದ್ಧ ವೈದ್ಯ ಡಾ. ಬಿ.ಎಂ. ಹೆಗ್ಡೆ ಮನೆಗೆ ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು