7:58 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೇಂದ್ರ ಬಿಜೆಪಿ ಸರಕಾರ ಹಿಂದುತ್ವ ನೀತಿಯನ್ನು ಗಾಳಿಗೆ ತೂರಿದೆ: ಡಾ. ಸುಬ್ರಮಣಿಯನ್ ಸ್ವಾಮಿ ಆರೋಪ

08/12/2021, 15:50

ಮಂಗಳೂರು(reporterkarnataka.com): ರಾಮ ಸೇತುವೆಯನ್ನು ಉಳಿಸಲು ನಾನು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ವಿರುದ್ಧ ಹೋರಾಟ ನಡೆಸಿದ್ದೆ. ಆದರೆ ಮೋದಿ ಸರಕಾರ ಅದನ್ನು ಪಾರಂಪರಿಕ ಸ್ಮಾರಕ ಎಂದು ಗುರುತಿಸಲು ವಿಫಲವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ತನ್ನದೇ ಆದ ಆರ್ಥಿಕ ಹಾಗೂ ಹಿಂದುತ್ವ ನೀತಿಯನ್ನು ಗಾಳಿಗೆ ತೂರಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ರಾಜ್ಯಸಭೆ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಹೇಳಿದರು.


ಮಂಗಳವಾರ ರಾತ್ರಿ ನಗರಕ್ಕೆ ಆಗಮಿಸಿದ ಅವರು ಮಾಧ್ಯಮ ಜತೆ ಮಾತನಾಡಿ, ನಾನು ಬಿಜೆಪಿಯಲ್ಲಿ ತೃಪ್ತನಾಗಿದ್ದೇನೆ. ಆದರೆ ಕೇಂದ್ರ ಸರಕಾರದ ಕೆಲವು ನೀತಿಗಳ ಬಗ್ಗೆ ನನ್ನ ವಿರೋಧವಿದೆ. ಪ್ರಧಾನಿ ಮೋದಿ ತನ್ನ ನೀತಿಯನ್ನು ಸರಿಪಡಿಸಿಕೊಂಡರೆ ನನ್ನ ವಿರೋಧವೇನೂ ಇಲ್ಲ ಎಂದರು.

ಬಿಜೆಪಿ ಸರಕಾರದ ಬಗ್ಗೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೀಗ ಬಿಜೆಪಿ ತನ್ನ ಪ್ರಣಾಳಿಕೆಯನ್ನೇ ಮರೆತಿದೆ. ಹಿಂದುತ್ವ ನೀತಿ, ವಿದೇಶಿ ನೀತಿ, ಆರ್ಥಿಕ ನೀತಿಯನ್ನು ಮರೆತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಧ್ವನಿ ಎತ್ತುತ್ತಿದ್ದೇನೆ ಎಂದು ಅವರು ನುಡಿದರು.

ಡಾ. ಸುಬ್ರಮಣಿಯನ್ ಸ್ವಾಮಿ ಅವರು ಈ ಸಂದರ್ಭದಲ್ಲಿ ಪತ್ನಿ ಜತೆ ಪ್ರಸಿದ್ಧ ವೈದ್ಯ ಡಾ. ಬಿ.ಎಂ. ಹೆಗ್ಡೆ ಮನೆಗೆ ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು