10:53 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕೇಂದ್ರ ಬಿಜೆಪಿ ಸರಕಾರ ಹಿಂದುತ್ವ ನೀತಿಯನ್ನು ಗಾಳಿಗೆ ತೂರಿದೆ: ಡಾ. ಸುಬ್ರಮಣಿಯನ್ ಸ್ವಾಮಿ ಆರೋಪ

08/12/2021, 15:50

ಮಂಗಳೂರು(reporterkarnataka.com): ರಾಮ ಸೇತುವೆಯನ್ನು ಉಳಿಸಲು ನಾನು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ವಿರುದ್ಧ ಹೋರಾಟ ನಡೆಸಿದ್ದೆ. ಆದರೆ ಮೋದಿ ಸರಕಾರ ಅದನ್ನು ಪಾರಂಪರಿಕ ಸ್ಮಾರಕ ಎಂದು ಗುರುತಿಸಲು ವಿಫಲವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ತನ್ನದೇ ಆದ ಆರ್ಥಿಕ ಹಾಗೂ ಹಿಂದುತ್ವ ನೀತಿಯನ್ನು ಗಾಳಿಗೆ ತೂರಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ರಾಜ್ಯಸಭೆ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಹೇಳಿದರು.


ಮಂಗಳವಾರ ರಾತ್ರಿ ನಗರಕ್ಕೆ ಆಗಮಿಸಿದ ಅವರು ಮಾಧ್ಯಮ ಜತೆ ಮಾತನಾಡಿ, ನಾನು ಬಿಜೆಪಿಯಲ್ಲಿ ತೃಪ್ತನಾಗಿದ್ದೇನೆ. ಆದರೆ ಕೇಂದ್ರ ಸರಕಾರದ ಕೆಲವು ನೀತಿಗಳ ಬಗ್ಗೆ ನನ್ನ ವಿರೋಧವಿದೆ. ಪ್ರಧಾನಿ ಮೋದಿ ತನ್ನ ನೀತಿಯನ್ನು ಸರಿಪಡಿಸಿಕೊಂಡರೆ ನನ್ನ ವಿರೋಧವೇನೂ ಇಲ್ಲ ಎಂದರು.

ಬಿಜೆಪಿ ಸರಕಾರದ ಬಗ್ಗೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೀಗ ಬಿಜೆಪಿ ತನ್ನ ಪ್ರಣಾಳಿಕೆಯನ್ನೇ ಮರೆತಿದೆ. ಹಿಂದುತ್ವ ನೀತಿ, ವಿದೇಶಿ ನೀತಿ, ಆರ್ಥಿಕ ನೀತಿಯನ್ನು ಮರೆತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಧ್ವನಿ ಎತ್ತುತ್ತಿದ್ದೇನೆ ಎಂದು ಅವರು ನುಡಿದರು.

ಡಾ. ಸುಬ್ರಮಣಿಯನ್ ಸ್ವಾಮಿ ಅವರು ಈ ಸಂದರ್ಭದಲ್ಲಿ ಪತ್ನಿ ಜತೆ ಪ್ರಸಿದ್ಧ ವೈದ್ಯ ಡಾ. ಬಿ.ಎಂ. ಹೆಗ್ಡೆ ಮನೆಗೆ ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು