12:48 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಿಡಿದಿದ್ದ ಕಾಂಗ್ರೆಸ್: ರಾಜೀನಾಮೆ ಆಗ್ರಹಿಸಿ ನಂಜನಗೂಡಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ

20/12/2024, 20:47

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಂಜನಗೂಡಿನಲ್ಲಿ ನಂಜನಗೂಡು ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಹೆದ್ದಾರಿ ತಡೆದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


ನಂಜನಗೂಡು ನಗರದ ಹುಲ್ಲಹಳ್ಳಿ ವೃತ್ತದಲ್ಲಿ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ, ರಾಷ್ಟ್ರೀಯ ಹೆದ್ದಾರಿ ತಡೆದು ಅಮಿತ್ ಶಾ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕು. ದೇಶದಿಂದ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿ ತಹಸಿಲ್ದಾರ್ ರವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ ಪರಿಣಾಮ ಕೆಲ ಸಮಯ ಕಿಲೋ ಮೀಟರ್ ದೂರದ ತನಕ ಟ್ರಾಫಿಕ್ ಜಾಮ್ ಕಂಡು ಬಂತು.
ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ವಿವಿಧ ಪರ ಸಂಘಟನೆಗಳ ಮುಖಂಡರುಗಳು ಈ ಸಂದರ್ಭ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು