10:45 AM Tuesday31 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ…

ಇತ್ತೀಚಿನ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಕಡಲನಗರಿ ಮಂಗಳೂರಿಗೆ: ಕ್ಲಾಕ್ ಟವರ್ ನಿಂದ ಗೋವಿಂದ ಪೈ ಸರ್ಕಲ್ ವರೆಗೆ ಬೃಹತ್ ರೋಡ್‌ ಶೋ

28/04/2023, 19:43

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಶನಿವಾರ (ಏ.29) ಮಂಗಳೂರಿನಲ್ಲಿ ಬೃಹತ್ ರೋಡ್‌ ಶೋ ನಡೆಸಲಿದ್ದಾರೆ.
ನಗರದ ಪುರಭವನ ಸಮೀಪದ ಕ್ಲಾಕ್‌ ಟವರ್‍‌ನಿಂದ ಕೊಡಿಯಾಲ್‌ಬೈಲ್‌ನ ಮಂಜೇಶ್ವರ ಗೋವಿಂದ ಪೈ ಸರ್ಕಲ್‌ ವರೆಗೆ ಈ ರೋಡ್‌ ಶೋ ನಡೆಯಲಿದ್ದು, ಸಾವಿರಾರು ಮಂದಿ ಕಾರ್ಯಕರ್ತರು, ಬೆಂಬಲಿಗರು ಭಾಗವಹಿಸುವ ನಿರೀಕ್ಷೆಯಿದೆ.
ಸಂಜೆ 4:30ರಿಂದ ರೋಡ್‌ ಶೋ ಪ್ರಾರಂಭವಾಗಲಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಅಮಿತ್‌ ಶಾ ಅವರ ರೋಡ್‌ ಶೋ ಕರಾವಳಿ ಭಾಗದಲ್ಲಿ ಭಾರೀ ಸಂಚಲನ ಸೃಷ್ಟಿಸಲಿದೆ. ಆ ಮೂಲಕ ಚುನಾವಣೆಯ ಕಾವು ಇನ್ನಷ್ಟು ಏರಲಿದೆ.
ನಾಳೆ ಅಪರಾಹ್ನ 2:30ಕ್ಕೆ ಉಡುಪಿಗೆ ಆಗಮಿಸಲಿರುವ ಅಮಿತ್ ಶಾ ಅವರು ಬಳಿಕ ಬೈಂದೂರಿನಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಅನಂತರ ಸಂಜೆ ಮಂಗಳೂರಿಗೆ ಆಗಮಿಸಿ ರೋಡ್‌ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು