12:33 AM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಕಡಲನಗರಿ ಮಂಗಳೂರಿಗೆ: ಕ್ಲಾಕ್ ಟವರ್ ನಿಂದ ಗೋವಿಂದ ಪೈ ಸರ್ಕಲ್ ವರೆಗೆ ಬೃಹತ್ ರೋಡ್‌ ಶೋ

28/04/2023, 19:43

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಶನಿವಾರ (ಏ.29) ಮಂಗಳೂರಿನಲ್ಲಿ ಬೃಹತ್ ರೋಡ್‌ ಶೋ ನಡೆಸಲಿದ್ದಾರೆ.
ನಗರದ ಪುರಭವನ ಸಮೀಪದ ಕ್ಲಾಕ್‌ ಟವರ್‍‌ನಿಂದ ಕೊಡಿಯಾಲ್‌ಬೈಲ್‌ನ ಮಂಜೇಶ್ವರ ಗೋವಿಂದ ಪೈ ಸರ್ಕಲ್‌ ವರೆಗೆ ಈ ರೋಡ್‌ ಶೋ ನಡೆಯಲಿದ್ದು, ಸಾವಿರಾರು ಮಂದಿ ಕಾರ್ಯಕರ್ತರು, ಬೆಂಬಲಿಗರು ಭಾಗವಹಿಸುವ ನಿರೀಕ್ಷೆಯಿದೆ.
ಸಂಜೆ 4:30ರಿಂದ ರೋಡ್‌ ಶೋ ಪ್ರಾರಂಭವಾಗಲಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಅಮಿತ್‌ ಶಾ ಅವರ ರೋಡ್‌ ಶೋ ಕರಾವಳಿ ಭಾಗದಲ್ಲಿ ಭಾರೀ ಸಂಚಲನ ಸೃಷ್ಟಿಸಲಿದೆ. ಆ ಮೂಲಕ ಚುನಾವಣೆಯ ಕಾವು ಇನ್ನಷ್ಟು ಏರಲಿದೆ.
ನಾಳೆ ಅಪರಾಹ್ನ 2:30ಕ್ಕೆ ಉಡುಪಿಗೆ ಆಗಮಿಸಲಿರುವ ಅಮಿತ್ ಶಾ ಅವರು ಬಳಿಕ ಬೈಂದೂರಿನಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಅನಂತರ ಸಂಜೆ ಮಂಗಳೂರಿಗೆ ಆಗಮಿಸಿ ರೋಡ್‌ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು