9:09 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯ ಸ್ಥಿತಿ:ತಲೆ ಮೇಲೆ ಕೈ ಹೊತ್ತು ಕಣ್ಣೀರಿಟ್ಟ ಜನಾರ್ದನ ಪೂಜಾರಿ !

21/07/2021, 18:14

ಮಂಗಳೂರು( reporterkarnataka news): 

ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡಿಸ್  ಅವರ ಆರೋಗ್ಯ ಸ್ಥಿತಿಯನ್ನು ನೆನೆದು ಇನ್ನೊಬ್ಬ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ತಲೆ ಮೇಲೆ ಕೈಹೊತ್ತು ಕಣ್ಣೀರಿಟ್ಟ ಘಟನೆಗೆ ಭಾನುವಾರ ಮಂಗಳೂರು ಸಾಕ್ಷಿಯಾಯಿತು.

ನಗರದ ಖಾಸಗಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಅವರ ಆರೋಗ್ಯ ಸ್ಥಿತಿಯನ್ನು ಕಂಡ ಬಳಿಕ ಪೂಜಾರಿ ಅವರು ಕಣ್ಣೀರ ಕೋಡಿ ಹರಿಸಿದರು. ಮಾಧ್ಯಮದ ಜತೆ ಮಾತನಾಡಲು ಯತ್ನಿಸಿದ ಪೂಜಾರಿ ಅವರು ಭಾವುಕರಾಗಿ ಮಾತು ಹೊರ ಹೊಮ್ಮಲೇ ಇಲ್ಲ. ಎರಡು ಪದ ಆಡುವಷ್ಟರಲ್ಲಿ ಗದ್ಗದಿತರಾಗಿ ತಲೆ ಮೇಲೆ ಕೈಇಟ್ಟು ರೋಧಿಸಲಾರಂಭಿಸಿದರು.

ರಾಜಕೀಯದಲ್ಲಿ ಸಮಕಾಲೀನರಾದ ಪೂಜಾರಿ ಮತ್ತು ಆಸ್ಕರ್ ಫರ್ನಾಂಡಿಸ್ ಅವರು ಒಳ್ಳೆಯ ಮಿತ್ರರೂ ಕೂಡ ಆಗಿದ್ದರು. ಪೂಜಾರಿ ಅವರು ಸಂಸತ್ ನಲ್ಲಿ ಮಂಗಳೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರೆ, ಆಸ್ಕರ್ ಅವರು ನೆರೆಯ ಉಡುಪಿ ಕ್ಷೇತ್ರದಿಂದ ಲೋಕಸಭೆಯನ್ನು ಪ್ರತಿನಿಧಿಸುತ್ತಿದ್ದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಪ್ರಬಲ ನಾಯಕರಾಗಿ ಅವರು ಹೊರ ಹೊಮ್ಮಿದ್ದರು.

ಯೋಗಾಭ್ಯಾಸ ಮಾಡುವಾಗ ಜಾರಿ ಬಿದ್ದು ತಲೆಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಆಸ್ಕರ್ ಫೆರ್ನಾಂಡಿಸ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ನಗರದ ಅತ್ತಾವರದ ಫ್ಲ್ಯಾಟ್ ನಲ್ಲಿ ಎಂದಿನಂತೆ ಯೋಗಾಭ್ಯಾಸ ನಿರತರಾಗಿದ್ದ ವೇಳೆ ಮಾಜಿ ಸಚಿವರು ಬಿದ್ದು ಗಾಯಗೊಂಡಿದ್ದರು. ಹೊರ ನೋಟಕ್ಕೆ ಯಾವುದೇ ಗಾಯಗಳಿಲ್ಲದ ಹಿನ್ನೆಲೆಯಲ್ಲಿ ಅವರು ನಿರ್ಲಕ್ಷ್ಯ ವಹಿಸಿದ್ದರು. ಆದರೆ ಅದೇ ದಿನ ಸಂಜೆ ಡಯಾಲಿಸಿಸ್ ಗೆ ಆಸ್ಪತ್ರೆಗೆ ತೆರಳಿದಾಗ ತಲೆಯ ಒಳಭಾಗದಲ್ಲಿ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿ ಅವರನ್ನು ನೋಡಿಕೊಳ್ಳುವ ವೈದ್ಯರು ಮಾಹಿತಿ ನೀಡಿದ್ದರು. ನಂತರ ಅವರು ತೀವ್ರ ನಿಗಾ ಘಟಕಕ್ಕೆ ಸೇರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು