4:49 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯ ಸ್ಥಿತಿ:ತಲೆ ಮೇಲೆ ಕೈ ಹೊತ್ತು ಕಣ್ಣೀರಿಟ್ಟ ಜನಾರ್ದನ ಪೂಜಾರಿ !

21/07/2021, 18:14

ಮಂಗಳೂರು( reporterkarnataka news): 

ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡಿಸ್  ಅವರ ಆರೋಗ್ಯ ಸ್ಥಿತಿಯನ್ನು ನೆನೆದು ಇನ್ನೊಬ್ಬ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ತಲೆ ಮೇಲೆ ಕೈಹೊತ್ತು ಕಣ್ಣೀರಿಟ್ಟ ಘಟನೆಗೆ ಭಾನುವಾರ ಮಂಗಳೂರು ಸಾಕ್ಷಿಯಾಯಿತು.

ನಗರದ ಖಾಸಗಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಅವರ ಆರೋಗ್ಯ ಸ್ಥಿತಿಯನ್ನು ಕಂಡ ಬಳಿಕ ಪೂಜಾರಿ ಅವರು ಕಣ್ಣೀರ ಕೋಡಿ ಹರಿಸಿದರು. ಮಾಧ್ಯಮದ ಜತೆ ಮಾತನಾಡಲು ಯತ್ನಿಸಿದ ಪೂಜಾರಿ ಅವರು ಭಾವುಕರಾಗಿ ಮಾತು ಹೊರ ಹೊಮ್ಮಲೇ ಇಲ್ಲ. ಎರಡು ಪದ ಆಡುವಷ್ಟರಲ್ಲಿ ಗದ್ಗದಿತರಾಗಿ ತಲೆ ಮೇಲೆ ಕೈಇಟ್ಟು ರೋಧಿಸಲಾರಂಭಿಸಿದರು.

ರಾಜಕೀಯದಲ್ಲಿ ಸಮಕಾಲೀನರಾದ ಪೂಜಾರಿ ಮತ್ತು ಆಸ್ಕರ್ ಫರ್ನಾಂಡಿಸ್ ಅವರು ಒಳ್ಳೆಯ ಮಿತ್ರರೂ ಕೂಡ ಆಗಿದ್ದರು. ಪೂಜಾರಿ ಅವರು ಸಂಸತ್ ನಲ್ಲಿ ಮಂಗಳೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರೆ, ಆಸ್ಕರ್ ಅವರು ನೆರೆಯ ಉಡುಪಿ ಕ್ಷೇತ್ರದಿಂದ ಲೋಕಸಭೆಯನ್ನು ಪ್ರತಿನಿಧಿಸುತ್ತಿದ್ದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಪ್ರಬಲ ನಾಯಕರಾಗಿ ಅವರು ಹೊರ ಹೊಮ್ಮಿದ್ದರು.

ಯೋಗಾಭ್ಯಾಸ ಮಾಡುವಾಗ ಜಾರಿ ಬಿದ್ದು ತಲೆಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಆಸ್ಕರ್ ಫೆರ್ನಾಂಡಿಸ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ನಗರದ ಅತ್ತಾವರದ ಫ್ಲ್ಯಾಟ್ ನಲ್ಲಿ ಎಂದಿನಂತೆ ಯೋಗಾಭ್ಯಾಸ ನಿರತರಾಗಿದ್ದ ವೇಳೆ ಮಾಜಿ ಸಚಿವರು ಬಿದ್ದು ಗಾಯಗೊಂಡಿದ್ದರು. ಹೊರ ನೋಟಕ್ಕೆ ಯಾವುದೇ ಗಾಯಗಳಿಲ್ಲದ ಹಿನ್ನೆಲೆಯಲ್ಲಿ ಅವರು ನಿರ್ಲಕ್ಷ್ಯ ವಹಿಸಿದ್ದರು. ಆದರೆ ಅದೇ ದಿನ ಸಂಜೆ ಡಯಾಲಿಸಿಸ್ ಗೆ ಆಸ್ಪತ್ರೆಗೆ ತೆರಳಿದಾಗ ತಲೆಯ ಒಳಭಾಗದಲ್ಲಿ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿ ಅವರನ್ನು ನೋಡಿಕೊಳ್ಳುವ ವೈದ್ಯರು ಮಾಹಿತಿ ನೀಡಿದ್ದರು. ನಂತರ ಅವರು ತೀವ್ರ ನಿಗಾ ಘಟಕಕ್ಕೆ ಸೇರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು