6:38 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ. ವೀರೇಂದ್ರ ಹೆಗ್ಗಡೆ

24/07/2021, 18:48

ಮಂಗಳೂರು(reporterkarnataka news): ನಗರದ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಶನಿವಾರ ಆಗಮಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 

ಮಂಜುನಾಥ ಸ್ವಾಮಿಯ ಪ್ರಸಾದ ಹಚ್ಚಿ ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸಿದರು.

ಆಸ್ಪತ್ರೆಯಿಂದ ಹೊರ ಬಂದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಡಾ. ಹೆಗ್ಗಡೆ ಅವರು, ಮಂಜುನಾಥ ಸ್ವಾಮಿಯ ಪ್ರಸಾದ ಹಚ್ಚಿದ ಕುರಿತು ಮಾಹಿತಿ ನೀಡಿದರು.

ರಾಷ್ಟ ರಾಜಕಾರಣವನ್ನು ಪ್ರವೇಶಿಸಿದ ಆಸ್ಕರ್ ಫೆರ್ನಾಂಡಿಸ್ ಅವರು ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ನಿಕಟವರ್ತಿಯಾಗಿದ್ದರು. ಅವರು ರಾಜ್ಯಕ್ಕೆ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ. ಅವರ ಆರೋಗ್ಯಕ್ಕಾಗಿ ಪಕ್ಷಾತೀತವಾಗಿ ಈ ರಾಜ್ಯದ ಅದರಲ್ಲೂ ವಿಶೇಷವಾಗಿ ತುಳುನಾಡಿನ ಜನತೆ ಪ್ರಾರ್ಥನೆ ಸಲ್ಲಿಸಬೇಕೆಂದು ಅವರು ನುಡಿದರು.

ಆಸ್ಕರ್ ಅವರ ಮೆದುಳು ಈಗಲೂ ಕ್ರಿಯಾಶೀಲವಾಗಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ತಿಳಿಸಿದ್ದಾರೆ. ಆಸ್ಕರ್ ಅವರು ಶೀಘ್ರ ಗುಣಮುಖರಾಗಕೆಂದು ನಾನು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಡಾ. ಹೆಗ್ಗಡೆ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು