9:26 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಕೇಂದ್ರ- ರಾಜ್ಯ ಸರಕಾರ ವಿರುದ್ದದ ಜನರ ಧ್ವನಿಗೆ ಶಕ್ತಿ ತುಂಬಲು ಪ್ರಜಾಧ್ವನಿ ಸಮಾವೇಶ: ಶಾಸಕ ಡಾ. ಮಂಜುನಾಥ ಭಂಡಾರಿ

22/01/2023, 11:48

ಮಂಗಳೂರು(reporterkarnataka.com):ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ಎಲ್ಲ ರಂಗಗಳಲ್ಲಿಯೂ ಸಂಪೂರ್ಣ ವಿಫಲವಾಗಿದೆ. ಉಭಯ ಸರಕಾರಗಳಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಲೂ ಜನರಿಗೆ ಆಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಜನರ ಧ್ವನಿಗೆ ಶಕ್ತಿ ತುಂಬವ ಪ್ರಯತ್ನವೇ ಪ್ರಜಾಧ್ವನಿ ಎಂದು ಶಾಸಕ ಡಾ. ಮಂಜುನಾಥ ಭಂಡಾರಿ ಹೇಳಿದ್ದಾರೆ.
ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಆಧಾರ ಸ್ತಂಭಗಳಾದ ನ್ಯಾಯಾಂಗ, ಕಾರ್ಯಾಂಗ , ಚುನಾವಣಾ ಆಯೋಗದಂತಹ ಪ್ರಾಧಿಕಾರಗಳು ಕೆಲಸ ಮಾಡದಂತೆ ಮಾಡಿದ್ದಾರೆ. ಸರಕಾರದ ಯಾವುದೇ ಯೋಜನೆಗಳು ಕೂಡ ಸರಿಯಾಗಿ ಜಾರಿ ಆಗುತ್ತಿಲ್ಲ. ಅನೇಕ ಯೋಜನೆಗಳ ಬಗ್ಗೆ ಸುಳ್ಳು ಭರವಸೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ವಿದ್ಯಾರ್ಥಿಗಳಿಂದ ಹಿಡಿದು ವಯೋವೃದ್ಧರವರೆಗೆ ಜನರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದನ್ನು ಮರೆಮಾಚಿ ರಾಜ್ಯ ಸರಕಾರ ಜನರ ಕಣ್ಣಿಗೆ ಮಣ್ಣೆರಚ್ಚುತ್ತಿದೆ. “ರಾಜ್ಯ ಸರಕಾರ ಕೃಷಿಕರನ್ನು ಬೀದಿಗೆ ತಂದು ನಿಲ್ಲಿಸಿದೆ. ಕೃಷಿಕರಿಗೆ ಪೂರಕವಾಗಿ ಯಾವುದೇ ಯೋಜನೆಗಳನ್ನು ಜಾರಿ ಆಗುತ್ತಿಲ್ಲ ಎಂದು ಆರೋಪಿಸಿದರು.

ಜನ ಸಾಮಾನ್ಯರ ಧ್ವನಿಯಾಗಿ ಸರಕಾರದ ವೈಫಲ್ಯವನ್ನು ಖಂಡಿಸಲು ಹಾಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನಸ್ನೇಹಿ, ಜನಪರ, ಜನಹಿತಕ್ಕಾಗಿ ಕಾರ್ಯನಿರ್ವಹಿಸುವ ಕಾಂಗ್ರೆಸ್ ಪಕ್ಷವನ್ನು ಆಡಳಿತಕ್ಕೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ “ಪ್ರಜಾಧ್ವನಿ ಯಾತ್ರೆ” ಯನ್ನು ಹಮ್ಮಿಕೊಂಡಿದೆ. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಕೂಡಲೇ “ಗೃಹಜ್ಯೋತಿ” ಹಾಗೂ “ಗೃಹಲಕ್ಷ್ಮೀ” ಎಂಬ ಎರಡು ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಶಾಸಕ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು