1:56 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಕೇಂದ್ರ ಮತ್ತು ರಾಜ್ಯ ಸರಕಾರ ಬಡವರ, ರೈತ- ಕೃಷಿ ಕಾರ್ಮಿಕ ವಿರೋಧಿ: ಜಿ.ಸಿ.ಬಯ್ಯಾ ರೆಡ್ಡಿ ಆರೋಪ

28/11/2024, 22:44

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೇಂದ್ರ ಮತ್ತು ರಾಜ್ಯ ಸರಕಾರ ಬಡವರ, ರೈತ ಕೃಷಿ ಕಾರ್ಮಿಕ ವಿರೋಧಿ ಸರಕಾರವಾಗಿದೆ. ಇದರಿಂದ ಪ್ರಜಾಪ್ರಭುತ್ವ ಗಂಡಾಂತರದಲ್ಲಿದೆ. ಬಹುರಾಷ್ಟ್ರೀಯ, ದೇಶಿಯ ಬಂಡವಾಳ ಶಾಹಿಗಳಿಂದ ಕೃಷಿ ನಾಶವಾಗುತ್ತಿದೆ ಎಂದು ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ
ಜಿ.ಸಿ.ಬಯ್ಯಾ ರೆಡ್ಡಿ ಆರೋಪಿಸಿದರು.
ಪಟ್ಟಣದ ಪುರಸಭೆ ಮುಂಭಾಗದ ಎಂ.ಜಿ. ರಸ್ತೆಯಲ್ಲಿ ಸಿಪಿಎಂ ಪಕ್ಷದಿಂದ ಏರ್ಪಡಿಸಿದ್ದ 15ನೇ ಸಮ್ಮೇಳನ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ರಾಜ್ಯ ಸರಕಾರಗಳು ಬಡವರು, ರೈತರನ್ನು ಕಡೆಗಣಿಸಿ ಕಾರ್ಪೂರೇಟ್ ಬಂಡವಾಳಗಾರರ ಪರ ನಿಂತಿವೆ ಎಂದು ಅವರು ಆಪಾದಿಸಿದರು.
ಆಂತರಿಕ ಸಮಸ್ಯೆಗಳಿಂದ ಬಳಲುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರಗಳು ಪ್ರಜಾಪ್ರಭುತ್ವಕ್ಕೆ ಕಂಠಕವಾಗಿವೆ. ಕೃಷಿಕರ ಸಮಸ್ಯೆಗಳ ಪರಿಹಾರಕ್ಕೆ ಸ್ಪಂದಿಸದೆ ಬಹುರಾಷ್ಟ್ರೀಯ ಕಂಪನಿಗಳು ಸ್ಥಾಪಿಸಿ ರೈತರ ಭೂಮಿ ಕಸಿದುಕೊಳ್ಳುತ್ತಿದ್ದಾರೆ. ಸರಕಾರದ ರೈತ ವಿರೋದಿ ನೀತಿಗಳಿಂದ ಉಳುವವನೆ ಭೂಮಿ ಒಡೆಯ ರೈತ ಎನ್ನುವುದು ಆಗುತ್ತಿಲ್ಲ. ಬಿಜೆಪಿ ಕಾಂಗ್ರೆಸ್ ಪ್ರವೇಟ್ ಲಿಮಿಟೆಡ್ ಪಕ್ಷಗಳಾಗಿವೆ. ಸಂವಿಧಾನ ಉಳಿದರೆ ಮಾತ್ರ ದೇಶ ಉಳಿಯುತ್ತದೆ. ನಾವು ಸಮ್ಮೇಳನದಲ್ಲಿ ದಲಿತರು, ಬಡವರ, ರೈತರ ಬಗ್ಗೆ ಚರ್ಚಿಸುತ್ತೇವೆ. ರಾಷ್ಟ್ರೀಯ ಪಕ್ಷಗಳು ಇಂದು ಕುಟುಂಬ ಪಕ್ಷಗಳಾಗಿವೆ ಎಂದು ಆರೋಪಿಸಿದರು.


ಕೆಪಿಆರೆಸ್ ಜಿಲ್ಲಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ವಾತಂತ್ರ ಬಂದು ೭೭ ವರ್ಷ ಕಳೆದರೂ ಭೂಮಿ ಸಮಸ್ಯೆ ಪರಿಹಾರವಾಗಿಲ್ಲ. ರೈತ ವಿರೋದಿ ನೀತಿಗಳಿಂದ ಜನ ನಲುಗುತ್ತಿದ್ದಾರೆ. ಕೃಷಿ ಪ್ರಧಾನ ಕೋಲಾರ ಜಿಲ್ಲೆ ಈಗ ಕೈಗಾರಿಕಾ ಪ್ರದೇಶವಾಗಿ ರೈತರಲ್ಲಿ ಇರಬೇಕಾದ ಭೂಮಿ ಬಂಡವಲಗಾರರ ಕೈಸೇರುತ್ತಿದೆ. ಅಭಿವೃದ್ಧಿ ಹೆಸರಲ್ಲಿ ರೈತರ ಭೂಮಿ ಕಿತ್ತುಕೊಳ್ಳುವ ಪರಿಸ್ಥಿತಿ ಬಂದಿದೆ. ಕೃಷಿ ಕೈ ಹಿಡಿಯುವ ಕೈಗಾರಿಕೆಗಳು ತೆರೆಯಬೇಕು. ಈಗಿರುವ ಕಂಪನಿಗಳಲ್ಲಿ ಕನಿಷ್ಟ ವೇತನ ೩೫ ಸಾವಿರ ಕೊಡದೆ ಕೇವಲ ೧೮ ಸಾವಿರ ಸಂಬಳ ಕೊಟ್ಟು ವಂಚಿಸಲಾಗುತ್ತಿದೆ. ತಾಲ್ಲೂಕಲ್ಲಿ ಮಾವು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸಲು ಮಾವು ತಿರುಳು ತೆಗೆಯುವ ಪಲ್ಪ್ ಕಾರ್ಖಾನೆಗೆ ಪ್ರಥಮ ಆದ್ಯತೆ ಕೊಟ್ಟು ರೈತರಿಗೆ ಅನುಕೂಲ ಮಾಡಬೇಕೆಂದು ಒತ್ತಾಯಿಸಿದರು.
ರೈತರ ಹಾಲಿಗೆ ಪ್ರೋತ್ಸಾಹಧನ ಲೀಟರ್‌ಗೆ ೧೦ ಕೊಟ್ಟು ಲೀಟರ್ ಹಾಲಿನ ಬೆಲೆ ೫೦ ರೂ. ಕೊಡಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಕೃಷಿ ಮಾಡುವ ಭೂಮಿಯಲ್ಲಿ ರೈತರನ್ನು ಒಕ್ಕಲೆಬ್ಬಿಸಿ ಅವರನ್ನು ಬೀದಿಗೆ ತಳ್ಳಿದ್ದಾರೆ. ಬಡವರಿಗೆ ನೆರವಾಗುವಂತೆ ಜನಸಾಮಾನ್ಯ ಆರೋಗ್ಯ ರಕ್ಷಣೆಗೆ ತಾಲ್ಲೂಕಿಗೊಂದು ಉನ್ನತ ಮಟ್ಟದ ಆಸ್ಪತ್ರೆಗಗಳು ತೆರೆದು ಬಡವರಿಗೆ ನೆರವಾಗಬೇಕೆಂದು ಆಗ್ರಹಿಸಿದರು.
ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರ ಜನ ವಿರೋಧಿ ಆರ್ಥಿಕ ನೀತಿ ಕೈ ಬಿಟ್ಟು, ಕಾರ್ಮಿಕರಿಗೆ ಕನಿಷ್ಟ ವೇತನ ೩೬ ಸಾವಿರ ಜಾರಿ ಮಾಡಿ. ಸರಕಾರ ಬಡವರ ರೈತರನ್ನು ಕಾಯುವ ಕೆಲಸ ಮಾಡಿ. ದುಡಿಯುವವರ ಮೇಲೆ ಕಳಜಿ ಇಲ್ಲದೆ ಅರಣ್ಯ ಭೂಮಿ ನೆಪದಲ್ಲಿ ರೈತರ ಭೂಮಿ ಕಿತ್ತುಕೊಳ್ಳುತ್ತಿರುವುದು ಸರಕಾರಕ್ಕೆ ಪಾಪವಾಗಿ ತಟ್ಟುತ್ತದೆ ಎಂದು ಕಿಡಿಕಾರಿದರು.
ಮಾಬೆಸಂ ಜಿಲ್ಲಾಧ್ಯಕ್ಷ ಚಿನ್ನಪ್ಪ ರೆಡ್ಡಿ, ಟಿ.ಎಂ. ವೆಂಟಕೇಶ್, ಮುನಿವೆಂಕಟಪ್ಪ, ಆರ್.ವೆಂಕಟೇಶ್, ಪಿ.ಶ್ರೀನಿವಾಸ್ ಹಾಜರಿದ್ದರು. ಜಿಲ್ಲಾ ಸಮಿತಿ ಸದಸ್ಯ ನವೀನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಎನ್.ಈರಪ್ಪ ರೆಡ್ಡಿ ವಂದಿಸಿದರು.

೨೩ ಶ್ರೀನಿವಾಸಪುರ ೧: ಸಿಪಿಐಎಂ ಪಕ್ಷದ ೧೮ನೇ ಸಮ್ಮೇಳನ ರಾಜ್ಯ ಕಾರ್ಯದರ್ಶಿ ಜಿ.ಸಿ.ಬಯ್ಯಾರೆಡ್ಡಿ ಉದ್ಘಾಟಿಸಿ ಮಾತನಾಡಿದರು. ೨೩ ಶ್ರೀನಿವಾಸಪುರ ೨: ಸರಕಾರಗಳ ಜನ ವಿರೋದಿ ನೀತಿ ಖಂಡಿಸಿ ಎಂಜಿ ರಸ್ತೆಯಲ್ಲಿ ಸಿಪಿಎಂ ಮುಖಂಡರು ಪ್ರತಿಭಟನೆೆ ಮಾಡಿದರು. ೨೩ ಶ್ರೀನಿವಾಸಪುರ ೩: ಸಿಪಿಐಎಂ ೧೮ನೇ ಸಮ್ಮೇಳನ ಅಂಗವಾಗಿ ಜಾನುಪದ ಕಲಾವಿದರು ಕೋಲಾಟ ಹಾಡಿದರು. ೨೩ ಶ್ರೀನಿವಾಸಪುರ ೪: ಸಿಪಿಐಎಂ ೧೮ನೇ ಸಮ್ಮೇಳನದಲ್ಲಿ ಭಾಗವಹಿಸಿದ್ದ ಮುಖಂಡರು.

ಇತ್ತೀಚಿನ ಸುದ್ದಿ

ಜಾಹೀರಾತು