3:54 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ: ಪಂಚಾಮೃತ ಮಹಾಭಿಷೇಕ ಸಮರ್ಪಣೆ

28/12/2022, 17:26

ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಬಿಜೆಪಿಯ ಫೈಯರ್ ಬ್ರಾಂಡ್ ನಾಯಕಿ,
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸಂಕಲ್ಪ ನೆರವೇರಿಸಿದ ಬಳಿಕ ಸಚಿವೆ ಕುಟುಂಬ ಸಮೇತ
ದೇವರ ದರುಶನ ಪಡೆದರು. ಪಂಚಾಮೃತ ಮಹಾಭಿಷೇಕ ಸೇವೆ ಸಮರ್ಪಿಸಿದರು. ಸಚಿವೆ ಮಧ್ಹಾಹ್ನ ದೇವರ ಮಹಾಪೂಜೆ
ವೀಕ್ಷಿಸಿ ಸೇವೆ ನೆರವೇರಿಸಿದರು.

ದೇವಳದ ಪ್ರಧಾನ ಅರ್ಚಕ ಸೀತಾರಾಮ ಯಡಪಡಿತ್ತಾಯ ಅವರು ಸಚಿವರಿಗೆ ಶಾಲು ಮತ್ತು ದೇವರ ಮಹಾಪ್ರಸಾದ ನೀಡಿದರು.
ನಂತರ ಸಚಿವೆ ಹೊಸಳಿಗಮ್ಮನ ದರ್ಶನ ಪಡೆದರು. ಬಳಿಕ ದೇವಳದಲ್ಲಿ ಭೋಜನ ಸ್ವೀಕರಿಸಿದರು. ನಂತರ ಆಡಳಿತ ಕಚೇರಿಗೆ ಭೇಟಿ ನೀಡಿದರು. ಈ ವೇಳೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಶಾಲು ಹೊದಿಸಿ ದೇವರ ಮಹಾಪ್ರಸಾದ ನೀಡಿ ಗೌರವಿಸಿದರು. ಬ್ರಹ್ಮರಥ ಎಳೆದ ಪವಿತ್ರ ಬೆತ್ತವನ್ನು ಸಚಿವರಿಗೆ ನೀಡಿದರು. ಬಳಿಕ ಆದಿಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿದ ಸಚಿವರು ದೇವರ ದರುಶನ ಪಡೆದು ಮೃತ್ತಿಕಾ ಪ್ರಸಾದ ಸ್ವೀಕರಿಸಿದರು.

ಕುಕ್ಕೆ ಕ್ಷೇತ್ರದಲ್ಲಿ ಸೇವೆ ನೆರವೇರಿಸಲು ಸಲುವಾಗಿಯೇ ಸಚಿವರ ದೆಹಲಿಯಿಂದ ಆಗಮಿಸಿದರು. ಬೆಳಗ್ಗೆ 9 ಗಂಟೆಗೆ ಕ್ಷೇತ್ರಕ್ಕೆ ಆಗಮಿಸಿ ಸಂಕಲ್ಪ ವಿದಿ ವಿಧಾನ ನೆರವೇರಿಸಿ ಪಂಚಾಮೃತ ಮಹಾಭಿಷೇಕ ಸೇವೆ ನೆರವೇರಿಸಿದರು. 1 ಗಂಟೆಗೂ ಅಧಿಕ ಕಾಲ ದೇವರ ಪಂಚಾಮೃತ ಮಹಾಭಿಷೇಕ ವೀಕ್ಷಿಸಿದರು.

ಸಚಿವೆ ಜತೆಗೆ ಅವರ ಪತಿ ಜುಬಿನ್ ಇರಾನಿ ಮತ್ತು ಪುತ್ರಿ ಜೋಯಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು