11:39 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ: ಪಂಚಾಮೃತ ಮಹಾಭಿಷೇಕ ಸಮರ್ಪಣೆ

28/12/2022, 17:26

ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಬಿಜೆಪಿಯ ಫೈಯರ್ ಬ್ರಾಂಡ್ ನಾಯಕಿ,
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸಂಕಲ್ಪ ನೆರವೇರಿಸಿದ ಬಳಿಕ ಸಚಿವೆ ಕುಟುಂಬ ಸಮೇತ
ದೇವರ ದರುಶನ ಪಡೆದರು. ಪಂಚಾಮೃತ ಮಹಾಭಿಷೇಕ ಸೇವೆ ಸಮರ್ಪಿಸಿದರು. ಸಚಿವೆ ಮಧ್ಹಾಹ್ನ ದೇವರ ಮಹಾಪೂಜೆ
ವೀಕ್ಷಿಸಿ ಸೇವೆ ನೆರವೇರಿಸಿದರು.

ದೇವಳದ ಪ್ರಧಾನ ಅರ್ಚಕ ಸೀತಾರಾಮ ಯಡಪಡಿತ್ತಾಯ ಅವರು ಸಚಿವರಿಗೆ ಶಾಲು ಮತ್ತು ದೇವರ ಮಹಾಪ್ರಸಾದ ನೀಡಿದರು.
ನಂತರ ಸಚಿವೆ ಹೊಸಳಿಗಮ್ಮನ ದರ್ಶನ ಪಡೆದರು. ಬಳಿಕ ದೇವಳದಲ್ಲಿ ಭೋಜನ ಸ್ವೀಕರಿಸಿದರು. ನಂತರ ಆಡಳಿತ ಕಚೇರಿಗೆ ಭೇಟಿ ನೀಡಿದರು. ಈ ವೇಳೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಶಾಲು ಹೊದಿಸಿ ದೇವರ ಮಹಾಪ್ರಸಾದ ನೀಡಿ ಗೌರವಿಸಿದರು. ಬ್ರಹ್ಮರಥ ಎಳೆದ ಪವಿತ್ರ ಬೆತ್ತವನ್ನು ಸಚಿವರಿಗೆ ನೀಡಿದರು. ಬಳಿಕ ಆದಿಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿದ ಸಚಿವರು ದೇವರ ದರುಶನ ಪಡೆದು ಮೃತ್ತಿಕಾ ಪ್ರಸಾದ ಸ್ವೀಕರಿಸಿದರು.

ಕುಕ್ಕೆ ಕ್ಷೇತ್ರದಲ್ಲಿ ಸೇವೆ ನೆರವೇರಿಸಲು ಸಲುವಾಗಿಯೇ ಸಚಿವರ ದೆಹಲಿಯಿಂದ ಆಗಮಿಸಿದರು. ಬೆಳಗ್ಗೆ 9 ಗಂಟೆಗೆ ಕ್ಷೇತ್ರಕ್ಕೆ ಆಗಮಿಸಿ ಸಂಕಲ್ಪ ವಿದಿ ವಿಧಾನ ನೆರವೇರಿಸಿ ಪಂಚಾಮೃತ ಮಹಾಭಿಷೇಕ ಸೇವೆ ನೆರವೇರಿಸಿದರು. 1 ಗಂಟೆಗೂ ಅಧಿಕ ಕಾಲ ದೇವರ ಪಂಚಾಮೃತ ಮಹಾಭಿಷೇಕ ವೀಕ್ಷಿಸಿದರು.

ಸಚಿವೆ ಜತೆಗೆ ಅವರ ಪತಿ ಜುಬಿನ್ ಇರಾನಿ ಮತ್ತು ಪುತ್ರಿ ಜೋಯಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು