4:03 PM Sunday17 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಕೇಂದ್ರ ಸಂಪುಟ ಮೇಜರ್ ಸರ್ಜರಿ; ರಾಜ್ಯದಿಂದ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಎ. ನಾರಾಯಣ ಸ್ವಾಮಿ ಸಹಿತ 4 ಮಂದಿಗೆ ಸಚಿವ ಸ್ಥಾನ

07/07/2021, 19:15

ನವದೆಹಲಿ(reporterkarnataka news):
ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆದಿದ್ದು, ರಾಜ್ಯದಿಂದ ಚಿತ್ರದುರ್ಗದ ಸಂಸದ ಎ. ನಾರಾಯಣ ಸ್ವಾಮಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ  ಹಾಗೂ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್  ಸೇರಿದಂತೆ ನಾಲ್ವರನ್ನು ಸಂಪುಟಕ್ಕೆ ಸೇರಿಸಲಾಗಿದೆ.

ಎರಡನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನರೇಂದ್ರ ಮೋದಿ ಅವರು ನಡೆಯುತ್ತಿರುವ ಮೊದಲ ಸಂಪುಟ ಪುನರ್ ರಚನೆ ಇದಾಗಿದೆ. ಹಲವು ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಹೊಸಬರಿಗೆ ದಾರಿ ಮಾಡಿಕೊಟ್ಟಿದ್ದಾರೆ. ರಾಷ್ಟಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯದಿಂದ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಅವರನ್ನು ಸಂಪುಟದಿಂದ ಕೈಬಿಟ್ಟು ಒಕ್ಕಲಿಗ ಸಮುದಾಯದ ಶೋಭಾ ಕರಂದಾಜ್ಲೆ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಸದಾನಂದ ಗೌಡ ಅವರನ್ನು ಈ ಬಾರಿ ಸಂಪುಟದಿಂದ ಕೈಬಿಡಲಾಗುತ್ತದೆ ಎಂದು ರಿಪೋರ್ಟರ್ ಕರ್ನಾಟಕ ಒಂದು ವಾರದ ಹಿಂದೆಯೇ ವಿಶೇಷ ವರದಿ ಮಾಡಿತ್ತು. ರಾಜ್ಯದ ಸಂಸದ ಭಗವಂತ ಖೂಬ ಅವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.

ಬಿಜೆಪಿ ಸೇರಿರುವ ಮಾಜಿ ಕಾಂಗ್ರೆಸ್ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ, ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭೆ ಸದಸ್ಯ ಭೂಪೇಂದ್ರ ಯಾದವ್, ಮತ್ತು ಉತ್ತರ ಪ್ರದೇಶದ ಬಿಜೆಪಿ ಉಪಾಧ್ಯಕ್ಷ ಬಿ ಎಲ್ ವರ್ಮಾ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.

ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡ, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ಸಚಿವ ಚೌಧರಿ ಸೇರಿದಂತೆ ಹಲವು ಮಂದಿಯನ್ನು ಸಂಪುಟದಿಂದ ಕೈಬಿಡಲಾಗಿದೆ.

ಕರ್ನಾಟಕದ ಸಂಸದೆ ಶೋಭಾ ಕರಂದ್ಲಾಜೆ, ಸಿರ್ಸಾ ಸಂಸದೆ ಸುನೀತಾ ದುಗ್ಗರ್, ದೆಹಲಿ ಸಂಸದೆ ಮೀನಾಕ್ಷಿ ಲೇಖಿ ಮತ್ತು ಮಹಾರಾಷ್ಟ್ರ ಸಂಸದೆಯರಾದ ಹಿನಾ ಗವಿತ್ ಮತ್ತು ಪ್ರೀತಂ ಮುಂಡೆ ಸೇರಿದಂತೆ ಮಹಿಳೆರಿಗೆ ಸಂಪುಟ ವಿಸ್ತರಣೆಯಲ್ಲಿ ಪ್ರಾಮುಖ್ಯತೆ ನೀಡಲಾಗಿದೆ.

ಡಿವಿಎಸ್ ಔಟ್: ರಿಪೋರ್ಟರ್ ಕರ್ನಾಟಕ ವಾರದ ಹಿಂದೆಯೇ ವರದಿ ಮಾಡಿತ್ತು

ರಾಜ್ಯದ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಅವರನ್ನು ಕೇಂದ್ರ ಸಂಪುಟದಿಂದ ಈ ಬಾರಿ ಕೈಬಿಡಲಾಗುತ್ತದೆ ಎಂದು ರಿಪೋರ್ಟರ್ ಕರ್ನಾಟಕ ವಾರದ ಹಿಂದೆಯೇ ವಿಶೇಷ ವರದಿ ಮಾಡಿತ್ತು.

ಸದಾನಂದ ಗೌಡ ಅವರು ಕೇಂದ್ರ ಸಂಪುಟದಲ್ಲಿ ಎರಡು ಬಾರಿ ಸಚಿವರಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಒಕ್ಕಲಿಗ ಸಮುದಾಯಕ್ಕೆ ಸೇರಿದ ಸದಾನಂದ ಗೌಡ ಅವರ ಬದಲಿಗೆ ಅದೇ ಸಮುದಾಯದ ಶೋಭಾ ಕರಂದಾಜ್ಲೆ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು