3:26 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಕೇಂದ್ರ ಸಂಪುಟ ಮೇಜರ್ ಸರ್ಜರಿ; ರಾಜ್ಯದಿಂದ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಎ. ನಾರಾಯಣ ಸ್ವಾಮಿ ಸಹಿತ 4 ಮಂದಿಗೆ ಸಚಿವ ಸ್ಥಾನ

07/07/2021, 19:15

ನವದೆಹಲಿ(reporterkarnataka news):
ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆದಿದ್ದು, ರಾಜ್ಯದಿಂದ ಚಿತ್ರದುರ್ಗದ ಸಂಸದ ಎ. ನಾರಾಯಣ ಸ್ವಾಮಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ  ಹಾಗೂ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್  ಸೇರಿದಂತೆ ನಾಲ್ವರನ್ನು ಸಂಪುಟಕ್ಕೆ ಸೇರಿಸಲಾಗಿದೆ.

ಎರಡನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನರೇಂದ್ರ ಮೋದಿ ಅವರು ನಡೆಯುತ್ತಿರುವ ಮೊದಲ ಸಂಪುಟ ಪುನರ್ ರಚನೆ ಇದಾಗಿದೆ. ಹಲವು ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಹೊಸಬರಿಗೆ ದಾರಿ ಮಾಡಿಕೊಟ್ಟಿದ್ದಾರೆ. ರಾಷ್ಟಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯದಿಂದ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಅವರನ್ನು ಸಂಪುಟದಿಂದ ಕೈಬಿಟ್ಟು ಒಕ್ಕಲಿಗ ಸಮುದಾಯದ ಶೋಭಾ ಕರಂದಾಜ್ಲೆ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಸದಾನಂದ ಗೌಡ ಅವರನ್ನು ಈ ಬಾರಿ ಸಂಪುಟದಿಂದ ಕೈಬಿಡಲಾಗುತ್ತದೆ ಎಂದು ರಿಪೋರ್ಟರ್ ಕರ್ನಾಟಕ ಒಂದು ವಾರದ ಹಿಂದೆಯೇ ವಿಶೇಷ ವರದಿ ಮಾಡಿತ್ತು. ರಾಜ್ಯದ ಸಂಸದ ಭಗವಂತ ಖೂಬ ಅವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.

ಬಿಜೆಪಿ ಸೇರಿರುವ ಮಾಜಿ ಕಾಂಗ್ರೆಸ್ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ, ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭೆ ಸದಸ್ಯ ಭೂಪೇಂದ್ರ ಯಾದವ್, ಮತ್ತು ಉತ್ತರ ಪ್ರದೇಶದ ಬಿಜೆಪಿ ಉಪಾಧ್ಯಕ್ಷ ಬಿ ಎಲ್ ವರ್ಮಾ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.

ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡ, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ಸಚಿವ ಚೌಧರಿ ಸೇರಿದಂತೆ ಹಲವು ಮಂದಿಯನ್ನು ಸಂಪುಟದಿಂದ ಕೈಬಿಡಲಾಗಿದೆ.

ಕರ್ನಾಟಕದ ಸಂಸದೆ ಶೋಭಾ ಕರಂದ್ಲಾಜೆ, ಸಿರ್ಸಾ ಸಂಸದೆ ಸುನೀತಾ ದುಗ್ಗರ್, ದೆಹಲಿ ಸಂಸದೆ ಮೀನಾಕ್ಷಿ ಲೇಖಿ ಮತ್ತು ಮಹಾರಾಷ್ಟ್ರ ಸಂಸದೆಯರಾದ ಹಿನಾ ಗವಿತ್ ಮತ್ತು ಪ್ರೀತಂ ಮುಂಡೆ ಸೇರಿದಂತೆ ಮಹಿಳೆರಿಗೆ ಸಂಪುಟ ವಿಸ್ತರಣೆಯಲ್ಲಿ ಪ್ರಾಮುಖ್ಯತೆ ನೀಡಲಾಗಿದೆ.

ಡಿವಿಎಸ್ ಔಟ್: ರಿಪೋರ್ಟರ್ ಕರ್ನಾಟಕ ವಾರದ ಹಿಂದೆಯೇ ವರದಿ ಮಾಡಿತ್ತು

ರಾಜ್ಯದ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಅವರನ್ನು ಕೇಂದ್ರ ಸಂಪುಟದಿಂದ ಈ ಬಾರಿ ಕೈಬಿಡಲಾಗುತ್ತದೆ ಎಂದು ರಿಪೋರ್ಟರ್ ಕರ್ನಾಟಕ ವಾರದ ಹಿಂದೆಯೇ ವಿಶೇಷ ವರದಿ ಮಾಡಿತ್ತು.

ಸದಾನಂದ ಗೌಡ ಅವರು ಕೇಂದ್ರ ಸಂಪುಟದಲ್ಲಿ ಎರಡು ಬಾರಿ ಸಚಿವರಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಒಕ್ಕಲಿಗ ಸಮುದಾಯಕ್ಕೆ ಸೇರಿದ ಸದಾನಂದ ಗೌಡ ಅವರ ಬದಲಿಗೆ ಅದೇ ಸಮುದಾಯದ ಶೋಭಾ ಕರಂದಾಜ್ಲೆ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು