12:16 PM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಕೇಂದ್ರ ಸಂಪುಟ ಶೀಘ್ರ ವಿಸ್ತರಣೆ: ಡಿ.ವಿ. ಸದಾನಂದ ಗೌಡ ಔಟ್?; ಮತ್ಯಾರಿಗೆ ರಾಜ್ಯದಿಂದ ಸಚಿವ ಸ್ಥಾನ?

27/06/2021, 19:48

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದ್ದು, ರಾಜ್ಯಕ್ಕೆ ಎರಡು ಸ್ಥಾನ ಕೊಡುವ ಬಗ್ಗೆ ಹಕ್ಕೊತ್ತಾಯ ಕೇಳಿಬರುತ್ತಿದೆ. ಈ ಮಧ್ಯೆ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಸಂಪುಟದಿಂದ ಕೊಕ್ ನೀಡಿ ಹೊಸ ಮುಖಕ್ಕೆ ಅವಕಾಶ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇಂದ್ರ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಹಾಗೂ ರೈಲ್ವೆ ಸಹಾಯಕ ಸಚಿವ ಸುರೇಶ್ ಅಂಗಡಿ ನಿಧನ ಹಾಗೂ ಶಿವಸೇನೆ ಮತ್ತು ಅಕಾಲಿದಳದ ಸಚಿವರು ಸಂಪುಟದಿಂದ ನಿರ್ಗಮಿಸಿದ ಬಳಿಕ ಕೇಂದ್ರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆದಿಲ್ಲ. ಅದಲ್ಲದೆ 2024ರಲ್ಲಿ ಸಂಸತ್ ಚುನಾವಣೆ ಕೂಡ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟ ವಿಸ್ತರಣೆ ಅನಿವಾರ್ಯವಾಗಿದೆ ಎನ್ನಲಾಗಿದೆ.

ಬೆಳಗಾವಿಯ ಸುರೇಶ್ ಅಂಗಡಿ ಅವರ ಸಾವಿನಿಂದ ತೆರನಾದ ಸ್ಥಾನವನ್ನು ಅವರದೇ ಸಮುದಾಯವರಿಗೆ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ನಿಧನರಾದ ಸಿ.ಎಂ. ಉದಾಸೀನ ಅವರ ಪುತ್ರ ಶಿವಕುಮಾರ್ ಉದಾಸಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರ ಹೆಸರು ಕೇಳಿಬರುತ್ತಿದೆ.

ರಾಜ್ಯ ನಾಯಕತ್ವ ಮುಂದಿನ ವಿಧಾನಸಭೆ ಚುನಾವಣೆ ವರೆಗೆ ಬದಲಾಗುವ ಸಾಧ್ಯತೆ ಕಡಿಮೆ ಇರುವುದರಿಂದ ಶಿವಕುಮಾರ್ ಉದಾಸಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ. ಇಷ್ಟೇ ಅಲ್ಲದೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಉಮೇಶ್ ಜಾಧವ್ ಅವರ ಹೆಸರು ಕೂಡ ಇದೆ. ಈ ಮಧ್ಯೆ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರನ್ನು ಸಂಪುಟದಿಂದ ಕೈಬಿಡುತ್ತಾರೆ ಎಂಬ ಮಾಹಿತಿ ಇದೆ. ಡಿವಿಎಸ್ ಬದಲು ಹೊಸ ಮುಖಕ್ಕೆ ಅವಕಾಶ ನೀಡುತ್ತಾರೆ ಎನ್ನಲಾಗಿದೆ. ಡಿವಿಎಸ್ ಅವರನ್ನು ಸಂಪುಟದಿಂದ ಕೈಬಿಟ್ಟರೆ ಉಮೇಶ್ ಜಾಧವ್ ಅವರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗುವ ಬಹುತೇಕ ಸಾಧ್ಯತೆಗಳಿವೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು