3:32 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೇಂದ್ರ ಸಂಪುಟ ಶೀಘ್ರ ವಿಸ್ತರಣೆ: ಡಿ.ವಿ. ಸದಾನಂದ ಗೌಡ ಔಟ್?; ಮತ್ಯಾರಿಗೆ ರಾಜ್ಯದಿಂದ ಸಚಿವ ಸ್ಥಾನ?

27/06/2021, 19:48

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದ್ದು, ರಾಜ್ಯಕ್ಕೆ ಎರಡು ಸ್ಥಾನ ಕೊಡುವ ಬಗ್ಗೆ ಹಕ್ಕೊತ್ತಾಯ ಕೇಳಿಬರುತ್ತಿದೆ. ಈ ಮಧ್ಯೆ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಸಂಪುಟದಿಂದ ಕೊಕ್ ನೀಡಿ ಹೊಸ ಮುಖಕ್ಕೆ ಅವಕಾಶ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇಂದ್ರ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಹಾಗೂ ರೈಲ್ವೆ ಸಹಾಯಕ ಸಚಿವ ಸುರೇಶ್ ಅಂಗಡಿ ನಿಧನ ಹಾಗೂ ಶಿವಸೇನೆ ಮತ್ತು ಅಕಾಲಿದಳದ ಸಚಿವರು ಸಂಪುಟದಿಂದ ನಿರ್ಗಮಿಸಿದ ಬಳಿಕ ಕೇಂದ್ರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆದಿಲ್ಲ. ಅದಲ್ಲದೆ 2024ರಲ್ಲಿ ಸಂಸತ್ ಚುನಾವಣೆ ಕೂಡ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟ ವಿಸ್ತರಣೆ ಅನಿವಾರ್ಯವಾಗಿದೆ ಎನ್ನಲಾಗಿದೆ.

ಬೆಳಗಾವಿಯ ಸುರೇಶ್ ಅಂಗಡಿ ಅವರ ಸಾವಿನಿಂದ ತೆರನಾದ ಸ್ಥಾನವನ್ನು ಅವರದೇ ಸಮುದಾಯವರಿಗೆ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ನಿಧನರಾದ ಸಿ.ಎಂ. ಉದಾಸೀನ ಅವರ ಪುತ್ರ ಶಿವಕುಮಾರ್ ಉದಾಸಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರ ಹೆಸರು ಕೇಳಿಬರುತ್ತಿದೆ.

ರಾಜ್ಯ ನಾಯಕತ್ವ ಮುಂದಿನ ವಿಧಾನಸಭೆ ಚುನಾವಣೆ ವರೆಗೆ ಬದಲಾಗುವ ಸಾಧ್ಯತೆ ಕಡಿಮೆ ಇರುವುದರಿಂದ ಶಿವಕುಮಾರ್ ಉದಾಸಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ. ಇಷ್ಟೇ ಅಲ್ಲದೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಉಮೇಶ್ ಜಾಧವ್ ಅವರ ಹೆಸರು ಕೂಡ ಇದೆ. ಈ ಮಧ್ಯೆ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರನ್ನು ಸಂಪುಟದಿಂದ ಕೈಬಿಡುತ್ತಾರೆ ಎಂಬ ಮಾಹಿತಿ ಇದೆ. ಡಿವಿಎಸ್ ಬದಲು ಹೊಸ ಮುಖಕ್ಕೆ ಅವಕಾಶ ನೀಡುತ್ತಾರೆ ಎನ್ನಲಾಗಿದೆ. ಡಿವಿಎಸ್ ಅವರನ್ನು ಸಂಪುಟದಿಂದ ಕೈಬಿಟ್ಟರೆ ಉಮೇಶ್ ಜಾಧವ್ ಅವರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗುವ ಬಹುತೇಕ ಸಾಧ್ಯತೆಗಳಿವೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು