12:57 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೇಂದ್ರ ಸಂಪುಟ ಶೀಘ್ರ ವಿಸ್ತರಣೆ: ಡಿ.ವಿ. ಸದಾನಂದ ಗೌಡ ಔಟ್?; ಮತ್ಯಾರಿಗೆ ರಾಜ್ಯದಿಂದ ಸಚಿವ ಸ್ಥಾನ?

27/06/2021, 19:48

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದ್ದು, ರಾಜ್ಯಕ್ಕೆ ಎರಡು ಸ್ಥಾನ ಕೊಡುವ ಬಗ್ಗೆ ಹಕ್ಕೊತ್ತಾಯ ಕೇಳಿಬರುತ್ತಿದೆ. ಈ ಮಧ್ಯೆ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಸಂಪುಟದಿಂದ ಕೊಕ್ ನೀಡಿ ಹೊಸ ಮುಖಕ್ಕೆ ಅವಕಾಶ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇಂದ್ರ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಹಾಗೂ ರೈಲ್ವೆ ಸಹಾಯಕ ಸಚಿವ ಸುರೇಶ್ ಅಂಗಡಿ ನಿಧನ ಹಾಗೂ ಶಿವಸೇನೆ ಮತ್ತು ಅಕಾಲಿದಳದ ಸಚಿವರು ಸಂಪುಟದಿಂದ ನಿರ್ಗಮಿಸಿದ ಬಳಿಕ ಕೇಂದ್ರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆದಿಲ್ಲ. ಅದಲ್ಲದೆ 2024ರಲ್ಲಿ ಸಂಸತ್ ಚುನಾವಣೆ ಕೂಡ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟ ವಿಸ್ತರಣೆ ಅನಿವಾರ್ಯವಾಗಿದೆ ಎನ್ನಲಾಗಿದೆ.

ಬೆಳಗಾವಿಯ ಸುರೇಶ್ ಅಂಗಡಿ ಅವರ ಸಾವಿನಿಂದ ತೆರನಾದ ಸ್ಥಾನವನ್ನು ಅವರದೇ ಸಮುದಾಯವರಿಗೆ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ನಿಧನರಾದ ಸಿ.ಎಂ. ಉದಾಸೀನ ಅವರ ಪುತ್ರ ಶಿವಕುಮಾರ್ ಉದಾಸಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರ ಹೆಸರು ಕೇಳಿಬರುತ್ತಿದೆ.

ರಾಜ್ಯ ನಾಯಕತ್ವ ಮುಂದಿನ ವಿಧಾನಸಭೆ ಚುನಾವಣೆ ವರೆಗೆ ಬದಲಾಗುವ ಸಾಧ್ಯತೆ ಕಡಿಮೆ ಇರುವುದರಿಂದ ಶಿವಕುಮಾರ್ ಉದಾಸಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ. ಇಷ್ಟೇ ಅಲ್ಲದೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಉಮೇಶ್ ಜಾಧವ್ ಅವರ ಹೆಸರು ಕೂಡ ಇದೆ. ಈ ಮಧ್ಯೆ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರನ್ನು ಸಂಪುಟದಿಂದ ಕೈಬಿಡುತ್ತಾರೆ ಎಂಬ ಮಾಹಿತಿ ಇದೆ. ಡಿವಿಎಸ್ ಬದಲು ಹೊಸ ಮುಖಕ್ಕೆ ಅವಕಾಶ ನೀಡುತ್ತಾರೆ ಎನ್ನಲಾಗಿದೆ. ಡಿವಿಎಸ್ ಅವರನ್ನು ಸಂಪುಟದಿಂದ ಕೈಬಿಟ್ಟರೆ ಉಮೇಶ್ ಜಾಧವ್ ಅವರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗುವ ಬಹುತೇಕ ಸಾಧ್ಯತೆಗಳಿವೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು