12:49 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೇಂದ್ರ ಸಂಪುಟದಿಂದ ಸದಾನಂದ ಗೌಡರಿಗೆ ಕೊಕ್ : ಪನಿಶ್ ಮೆಂಟೋ? ಅಲ್ಲ, ಕೊಡ್ತರಾ ಪ್ರಮೋಶನ್? 

08/07/2021, 09:58

ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದಲ್ಲಿ  ಸಚಿವ ಸಂಪುಟ ಕೊನೆಗೂ ಪುನರ್ ರಚನೆಯಾಗಿದೆ. ಹಲವರು ಸಂಪುಟದಿಂದ ಹೊರಗೆ ಬಿದ್ದಿದ್ದಾರೆ. ಹೊಸ ಮುಖಗಳು ಸೇರ್ಪಡೆಗೊಂಡಿವೆ. ಹೊರಬಿದ್ದ ಪ್ರಮುಖರಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರು ಕೂಡ ಸೇರಿದ್ದಾರೆ. ಹಾಗಾದರೆ ಡಿವಿಎಸ್ ಗೆ ಕೊಕ್ ನೀಡಲು ಕಾರಣವಾದರೂ ಏನು?

ಮೋದಿ ಅವರು ಅಸಮರ್ಥ, ಅದಕ್ಷ ಹಾಗೂ ಆರೋಗ್ಯ ಸಮಸ್ಯೆ ಇರುವ ಸಚಿವರಿಗೆ ಕ್ಯಾಬಿನೆಟ್ ನಿಂದ ಗೇಟ್ ಪಾಸ್ ನೀಡಿದ್ದಾರೆ. ಶಿಕ್ಷಣ, ಆರೋಗ್ಯ, ರಸಗೊಬ್ಬರ ಮುಂತಾದ ಖಾತೆಗಳು ಸಂಪೂರ್ಣ ಪುನರ್ ರಚನೆಯಾಗಲಿದೆ. ಆಡಳಿತವನ್ನು ಇನ್ನಷ್ಟು ಚುರುಕುಗೊಳಿಸುವ ಪ್ಲ್ಯಾನ್ ಇದಾಗಿದೆ. ಶಿಕ್ಷಣ, ಆರೋಗ್ಯ ಖಾತೆಯನ್ನು ಇನ್ನಷ್ಟು ಬಲಪಡಿಸುವ ಗುರಿಯನ್ನು ಪ್ರಧಾನಿ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ದೇಶದಲ್ಲಿ ಕೊರೊನಾದ 2ನೇ ಅಲೆ ಎದುರಿಸಲು ಕೇಂದ್ರ ಆರೋಗ್ಯ ಇಲಾಖೆ ತಕ್ಕದಾದ ಪೂರ್ವ ಸಿದ್ದತೆಯನ್ನು ಮಾಡಿಲ್ಲ ಎಂಬ ಆರೋಪಿಗಳ ದೇಶಾದ್ಯಂತ ಕೇಳಿ ಬಂದಿತ್ತು. ಅದಲ್ಲದೆ. 

ದೇಶಕ್ಕೆ ಮೆಡಿಕಲ್ ಆಕ್ಸಿಜನ್ ಕೊರತೆಯಾಗುತ್ತದೆ ಎಂಬ ಪೂರ್ವ ಮುನ್ಸೂಚನೆಯನ್ನು ಕೂಡ ನೀಡಿರಲಿಲ್ಲ. ಮೆಡಿಕಲ್ ಆಕ್ಸಿಜನ್ ಉತ್ಪಾದನೆ ಹೆಚ್ಚಳಕ್ಕೆ ಸೂಕ್ತ ಕ್ರಮ ಕೈಗೊಂಡಿರಲಿಲ್ಲ. ಇದು ಪ್ರಧಾನಿ ಮೋದಿ ಕೋಪಕ್ಕೆ ಕಾರಣವಾಗಿತ್ತು. ಇದರಿಂದ ಆರೋಗ್ಯ ಸಚಿವ ಡಾ. ಹರ್ಷವರ್ಧನ ತಲೆದಂಡವಾಯಿತು. 

ಅದೇ ರೀತಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಡಿ.ವಿ.ಸದಾನಂದ ಗೌಡ ಅವರ ರಸಾಯನಿಕ, ರಸಗೊಬ್ಬರ ಖಾತೆಗೂ ಆರೋಗ್ಯ ಖಾತೆಗೂ ನಿಕಟ ಸಂಬಂಧವಿದೆ. ಅದಲ್ಲದೆ ಕೇಂದ್ರದ ಫಾರ್ಮಾಸೂಟಿಕಲ್ಸ್ ಇಲಾಖೆ ಕೂಡ ಸದಾನಂದ ಗೌಡರ ಬಳಿಯೇ ಇತ್ತು. ದೇಶದಲ್ಲಿ ಕೊರೊನಾ ರೋಗಿಗಳಿಗೆ ನೀಡುವ ರೆಮಿಡಿಸಿವಿರ್ ಇಂಜೆಕ್ಷನ್, ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ನೀಡುವ ಅಂಪೋಟೆರಿಸಿನ್ ಬಿ ಡ್ರಗ್ಸ್ ಕೊರತೆಯಾಗದಂತೆ ನೋಡಿಕೊಳ್ಳುವುದು ಗೌಡರ ಜವಾಬ್ದಾರಿಯಾಗಿತ್ತು. ಆದರೆ ಕೊರತೆ ತೀವ್ರವಾಗಿ ತಲೆದೋರಿತ್ತು. ಈ ಡ್ರಗ್ಸ್ ಗಳ ಉತ್ಪಾದನೆ ಹೆಚ್ಚಳಕ್ಕೆ ಸದಾನಂದ ಗೌಡ ಕ್ರಮ ಕೈಗೊಂಡಿದ್ದರೂ

ಪ್ರಾರಂಭದಲ್ಲಿ ರೆಮಿಡಿಸಿವಿರ್ ಇಂಜೆಕ್ಷನ್ ಹಾಗೂ ಅಂಪೋಟೆರಿಸಿನ್ ಬಿ ಡ್ರಗ್ಸ್ ಗೆ ತೀವ್ರ ಕೊರತೆ ಉಂಟಾಗಿತ್ತು. ಬೇಗ ಉತ್ಪಾದನೆ ಹೆಚ್ಚಳ ಮಾಡಲು ಸಾಧ್ಯವಾಗಲಿಲ್ಲ. ಇಷ್ಟೇ ಅಲ್ಲದೆ ರಸಗೊಬ್ಬರ ಇಲಾಖೆಯಲ್ಲಿ ಸದಾನಂದ ಗೌಡರ ಸಹಾಯಕ ಮಂತ್ರಿಯಾಗಿದ್ದ ಗುಜರಾತ್‌ನ ಮನುಸುಖ್ ಮಾಂಡವಿಯಾ ಅವರು ಹೆಚ್ಚು ಕ್ರಿಯಾಶೀಲರಾಗಿರುವುದು ಕೂಡ ಡಿವಿಎಸ್ ಗೆ ಮುಳುವಾಯಿತು ಎನ್ನಲಾಗಿದೆ.

ಇನ್ನು ಸದಾನಂದ ಗೌಡ ಅವರನ್ನು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಮಾಡುತ್ತಾರೆ ಎಂಬ ಗುಸು ಗುಸು ಇದೆ. ಆದರೆ ಮುಖ್ಯಮಂತ್ರಿ ಸ್ಥಾನ ಖಾಲಿ ಇದ್ದರೆ ತಾನೆ ಸಿಎಂ ಆಗಲು ಸಾಧ್ಯ. ಸದ್ಯ ರಾಜ್ಯ ನಾಯಕತ್ವವನ್ನು ಬದಲಾಯಿಸುವ ಮನಸ್ಥಿತಿಯಲ್ಲಿ ಬಿಜೆಪಿ ಹೈಕಮಾಂಡ್ ಇಲ್ಲ ಎನ್ನಲಾಗಿದೆ. ಕೇಂದ್ರ ಸಂಪುಟದಲ್ಲಿ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಅವರಿಗೆ ಇದೇ ಕಾರಣಕ್ಕೆ ಮಂತ್ರಿ ಸ್ಥಾನ ನೀಡಲಿಲ್ಲ. ಮುಂದಿನ ಚುನಾವಣೆ ವರೆಗೂ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯುವ ಸಾಧ್ಯತೆಯೇ ಹೆಚ್ಚು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು