4:10 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರ ವಿರುದ್ಧ ಅನ್ನತಟ್ಟೆ ಹಿಡಿದು ಪ್ರತಿಭಟನೆ: ಮಾಜಿ ಸಚಿವ ರಮಾನಾಥ ರೈ

19/06/2023, 21:41

ಮಂಗಳೂರು(reporterkarnataka.com): ರಾಜ್ಯ ಸರಕಾರ ಜಾರಿ ಮಾಡಲು ಉದ್ದೇಶಿಸಿರುವ
ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ಕೇಂದ್ರ ಸರಕಾರ ನಿರಾಕರಿಸುತ್ತಿರುವುದನ್ನು ಖಂಡಿಸಿ ಇದೇ 20ರಂದು ಅನ್ನದ ತಟ್ಟೆ ಹಿಡಿದು ವಿನೂತನ ರೀತಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದರು.
ಅವರು ಸೋಮವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಎಫ್‌ಸಿಐ ಸಾಕಷ್ಟು ಅಕ್ಕಿಯನ್ನು ಹೊಂದಿದ್ದರೂ, ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಪೂರೈಕೆ ಕೇಂದ್ರವು ಸ್ಥಗಿತಗೊಳಿಸಿದೆ, ಇದು ಕಾಂಗ್ರೆಸ್‌ ಕಲ್ಯಾಣ ಯೋಜನೆಯನ್ನು ಕೇಂದ್ರವು ಹಾಳು ಮಾಡಲು ಪ್ರಯತ್ನಿಸುತ್ತಿದೆ. ವಾಸ್ತವವಾಗಿ, ಅಕ್ಕಿಯನ್ನು ಉಚಿತವಾಗಿ ಖರೀದಿಸಲಾಗುವುದಿಲ್ಲ. ರಾಜ್ಯ ಸರ್ಕಾರವು ಎಫ್‌ಸಿಐಗೆ ಪಾವತಿಸುತ್ತದೆ. ಬಡವರಿಗೆ ಅನ್ನ ನಿಲ್ಲಿಸಿದವರಿಗೆ ಜನ ತಕ್ಕ ಪಾಠ ಕಲಿಸಬೇಕು. ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿದೆ ಎಂದರು.
ಕೇಂದ್ರವು ರಾಜ್ಯಕ್ಕೆ ಯಾವುದೇ ಹೆಚ್ಚುವರಿ ಅಕ್ಕಿಯನ್ನು ಮಾರಾಟ ಮಾಡುವುದನ್ನು ಭಾರತೀಯ ಆಹಾರ ನಿಗಮ (ಎಫ್‌ಸಿಐ) ನಿಷೇಧಿಸುವ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಡೊಮೆಸ್ಟಿಕ್) (ಒಎಂಎಸ್‌ಎಸ್‌ಡಿ) ಅಡಿಯಲ್ಲಿ ರಾಜ್ಯ ಸರ್ಕಾರಗಳಿಗೆ ಅಕ್ಕಿ ಮಾರಾಟ ಸ್ಥಗಿತಗೊಳಿಸಿದೆ. ಈ ಕ್ರಮವನ್ನು ಖಂಡಿಸಲಾಗುತ್ತದೆ. ಅಕ್ಕಿ ನಿರಾಕರಣೆ ಮಾಡಿರುವುದರಿಂದ ರಾಜ್ಯದ ಬಡವರಿಗೆ ಅನ್ಯಾಯ ಆಗಿದೆ ಎಂದರು.

ಎಫ್‌ಸಿಐ ವಿವಿಧ ರಾಜ್ಯಗಳಿಗೆ ಅಕ್ಕಿ ಪೂರೈಸುತ್ತದೆ. ವಾಸ್ತವವಾಗಿ, ಎಫ್‌ಸಿಐ ತಿಂಗಳಿಗೆ 2.28 ಲಕ್ಷ ಟನ್‌ಗೆ ಕೆಜಿಗೆ 34 ರೂ.ಗೆ ರಾಜ್ಯದ ಮನವಿಗೆ ಸ್ಪಂದಿಸಿತ್ತು. ಇದ್ದಕ್ಕಿದ್ದಂತೆ ಈ ನೀತಿಯಲ್ಲಿ ಬದಲಾವಣೆ ಉಲ್ಲೇಖ ಮಾಡಿ ಹೆಚ್ಚುವರಿ ಅಕ್ಕಿ ಮಾರಾಟವನ್ನು ಸ್ಥಗಿತಗೊಳಿಸುವಂತೆ ಕೇಂದ್ರವು ಎಫ್‌ಸಿಐಗೆ ಹೇಳಿದ್ದು, ಹೆಚ್ಚುವರಿ ಅಕ್ಕಿಗಾಗಿ ರಾಜ್ಯದ ಮನವಿಗೆ ಪ್ರತಿಕ್ರಿಯಿಸುವಾಗ ನೀತಿಯಲ್ಲಿನ ಬದಲಾವಣೆಯ ಬಗ್ಗೆ ಎಫ್‌ಸಿಐಗೆ ತಿಳಿದಿರಲಿಲ್ಲವೆ ಎಂದು ಪ್ರಶ್ನೆ ಮಾಡಿದರು.
ಪ್ರತಿಪಕ್ಷದ ನಾಯಕರು ಉಚಿತ ಯೋಜನೆಗಳ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ. ಬಿಪಿಎಲ್ ಕಾರ್ಡ್‌ಗೆ 10 ಕೆಜಿ ಅಕ್ಕಿ ನೀಡುವುದಾಗಿ ಚುನಾವಣಾ ಪೂರ್ವ ನೀಡಿದ ಭರವಸೆಯಿಂದ ಸರ್ಕಾರ, ಒಂದು ಗ್ರಾಂ ಕಡಿಮೆ ಮಾಡಿದರೂ ಅದನ್ನು ಸಹಿಸುವುದಿಲ್ಲ ಎಂದು ಇದೇ ನಾಯಕರು ಹೇಳುತ್ತಿದ್ದಾರೆ. ದ್ವಂದ್ವ ನೀತಿ ಹೇಳಿಕೆ ಮೊದಲು ಕೈಬಿಡಿ ಎಂದು ರೈ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು