5:27 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ 3 ಕೃಷಿ ಕಾಯ್ದೆಗೆ ತೀವ್ರ ವಿರೋಧ: ರೈತ ಮಹಿಳೆಯರಿಂದ ಭಾರಿ ಪ್ರತಿಭಟನೆ 

14/09/2021, 12:09

ಬೆಂಗಳೂರು( reporterkarnataka.com): ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ವಿಧಾನಸೌಧ ಮುತ್ತಿಗೆ ಚಳುವಳಿಯಲ್ಲಿ ಭಾಗವಹಿಸಿದ ರೂಪಾ ಶ್ರೀನಿವಾಸ್ ನಾಯಕ ಅವರು ಮತ್ತು ಅನಿತಾ ಮಂತ್ರಿ ಮುಖಂಡರ ಸಮ್ಮುಖದಲ್ಲಿ ಸಾವಿರಾರು ಕಾರ್ಯಕರ್ತರು ರೈತರ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ರೂಪ ಶ್ರೀನಿವಾಸ್ ನಾಯಕ್ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ, ದೇಶಕ್ಕೆ ಅನ್ನ ಹಾಕುವ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರಕಾರಕ್ಕೆ ಬಡವರಿಗೆ ಬಗ್ಗೆ ಕಾಳಜಿ ಇಲ್ಲ. ಪ್ರತಿಯೊಂದು ಬೆಲೆಯು ಗಗನಕ್ಕೇರುತ್ತಿದ್ದು, ಬಡ ಕುಟುಂಬಗಳು ಬದುಕಲು ಕಷ್ಟವಾಗುತ್ತಿದೆ ಎಂದರು.

ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್ ಮಾತನಾಡಿ, ಕೃಷಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ ಇವುಗಳನ್ನು ವಾಪಸ್ ಪಡೆಯಬೇಕೆಂದು ಹೋರಾಟ ನಡೆಸಿದರು.ಕರ್ನಾಟಕ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಬದುಕಲು ಕಷ್ಟವಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಕಣ್ಣು-ಕಿವಿ ಇಲ್ಲವೇ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಅನಿತಾ ಮಂತ್ರಿ ಸೇರಿದಂತೆ ಈ ಸಂದರ್ಭದಲ್ಲಿ ಮರ್ಲಿಂಗ ಪಾಟೀಲ್, ಕೃಷ್ಣಪ್ಪ ,ರಂಗಪ್ಪ, ಶರಣಪ್ಪ ನಿಂಗಪ್ಪ ಇನ್ನಿತರ ಕಾರ್ಯಕ್ರಮ ಹಾಜರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು