10:52 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದಿಂದ ಅಕ್ಕಿ ನಿರಾಕರಣೆ: ಜೂ. 20ರಂದು ರಾಜ್ಯಾದ್ಯಂತ ‘ಭೂತ ದಹನ’ ಪ್ರತಿಭಟನೆಗೆ ಸಿಪಿಎಂ ಕರೆ

18/06/2023, 20:10

ಬೆಂಗಳೂರು(reporterkarnataka.com):ಕರ್ನಾಟಕ ಸರಕಾರ ಜೂಲೈ ಒಂದರಿಂದ ಎಲ್ಲ ಬಿಪಿಎಲ್, ಅಂತ್ಯೋದಯ ಕಾರ್ಡದಾರರಿಗೆ ಈಗ ನೀಡಲಾಗುತ್ತಿದ್ದ 5 ಕೆಜಿ ಅಕ್ಕಿಯನ್ನು ಹೆಚ್ಚಿಸಿ ತಲಾ 10 ಕೆಜಿ ಅಕ್ಕಿ ಅಥವಾ ಆಹಾರಧಾನ್ಯ ನೀಡಲು ನಿರ್ಧರಿಸಿ ಪ್ರಕಟಿಸಿದ್ದು ಸ್ವಾಗತಾರ್ಹವಾಗಿದೆ.
ಆದರೇ, ಒಕ್ಕೂಟ ಸರಕಾರವು ರಾಜ್ಯಕ್ಕೆ ಹೆಚ್ಚುವರಿ ಆಹಾರಧಾನ್ಯ ನೀಡುವಲ್ಲಿ ಸಂಕುಚಿತ ರಾಜಕೀಯ ಮಾಡುತ್ತಿರುವುದು ತೀವ್ರ ಖಂಡನೀಯವಾಗಿದೆ.

ರಾಜ್ಯ ಸರಕಾರದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹೆಚ್ಚುವರಿ ಆಹಾರಧಾನ್ಯ ನೀಡಲು ಭಾರತ ಆಹಾರ ನಿಗಮದ ಅಧಿಕಾರಿಗಳು ಒಪ್ಪಿದ್ದರೂ ಕೂಡಾ, ಒಕ್ಕೂಟ ಸರಕಾರ ಬಡವರ ವಿರೋಧಿಯಾಗಿ ನಿಂತಿರುವುದು ಅಕ್ಷಮ್ಯವಾಗಿದೆ. ಬಿಜೆಪಿ ಮತ್ತು ಒಕ್ಕೂಟ ಸರಕಾರ ತಮ್ಮ ಸಂಕುಚಿತ ಜನ ವಿರೋದಿ ರಾಜಕಾರಣವನ್ನು ಈ ಕೂಡಲೇ ಕೈ ಬಿಟ್ಟು ಒಪ್ಪಂದದಂತೆ ಭಾರತ ಆಹಾರ ನಿಗಮದ ಮೂಲಕ ಆಹಾರ ಧಾನ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಪಿಐಎಂ ಪಕ್ಷವು ಒಕ್ಕೂಟ ಸರಕಾರ ಹಾಗೂ ಪ್ರಧಾನ ಮಂತ್ರಿಗಳನ್ನು ಬಲವಾಗಿ ಒತ್ತಾಯಿಸುತ್ತದೆ.
ರಾಜ್ಯ ಸರಕಾರದ ಈ ಯೋಜನೆಯು ಬಡವರ ಹಸಿವು ನೀಗಿಸಲು ನೆರವಾಗುವ ಯೋಜನೆಯಾಗಿದ್ದು ಇದು ಹಸಿವಿನ ಸೂಚ್ಯಂಕದಲ್ಲಿ ಅತ್ಯಂತ ತಳ ಮಟ್ಟದಲ್ಲಿರುವ ನಮ್ಮ ದೇಶವನ್ನು ಸ್ವಲ್ಪವಾದರೂ ಮೇಲೆತ್ತುವ ಯೋಜನೆಯೆಂಬುದನ್ನು ಒಕ್ಕೂಟ ಸರಕಾರ ಅರಿಯ ಬೇಕು.
ಒಕ್ಕೂಟ ಸರಕಾರ ರಾಜ್ಯ ಹಿತದ ವಿರುದ್ದ ನಗ್ಙವಾಗಿ ನಿಂತಿರುವಾಗ ನಮ್ಮ ರಾಜ್ಯ ಬಹುತೇಕರು ಬಿಜೆಪಿ ಎಂಪಿಗಳಿರುವಾಗ ಅವರು ಬಾಯಿ ಹೊಲೆದುಕೊಂಡಿರುವುದು ಅವರ ವಿರೋದಿ ನೀತಿಯನ್ನು ಬಯಲುಗೊಳಿಸುತ್ತದೆ ಎಂದು ಕಟುವಾಗಿ ಠೀಕಿಸಿದೆ.
ಜನರಿಗೆ ಆಹಾರಧಾನ್ಯದ ಬದಲು ನಗದು ವರ್ಗಾವಣೆ ಮಾಡುವಂತೆ ಸೂಚಿಸುವ ಬಿಜೆಪಿ ಧೋರಣೆಯು ಬಡವರಪರವಾಗಿರದೇ ಲೂಟಿಕೋರ ಕಾರ್ಪೊರೇಟ್ ಕಂಪನಿಗಳ ಪರವಾದ ನೀತಿಯಾಗಿದೆ.
ಒಕ್ಕೂಟ ಸರಕಾರದ ಈ ಜನ ವಿರೋಧಿ ನೀತಿಯನ್ನು ಖಂಡಿಸಿ ರಾಜ್ಯದಾದ್ಯಂತ ಜೂನ್ 20 ರಂದು ಒಕ್ಕೂಟ ಸರಕಾರದ ಬಡವರ ವಿರೋಧಿ ನೀತಿಯ ಭೂತ ದಹನ ಮಾಡುವ‌ ಮೂಲಕ ತೀವ್ರ ಪ್ರತಿಭಟನಾ ಪ್ರದರ್ಶನ ನಡೆಸಲು ಸಿಪಿಎಂ ರಾಜ್ಯ ಸಮಿತಿ ತನ್ನೆಲ್ಲಾ ಘಟಕಗಳಿಗೆ ಮತ್ತು ರಾಜ್ಯದ ಜನತೆಗೆ ಕರೆ ನೀಡುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು