7:30 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದಿಂದ ಅಕ್ಕಿ ನಿರಾಕರಣೆ: ಜೂ. 20ರಂದು ರಾಜ್ಯಾದ್ಯಂತ ‘ಭೂತ ದಹನ’ ಪ್ರತಿಭಟನೆಗೆ ಸಿಪಿಎಂ ಕರೆ

18/06/2023, 20:10

ಬೆಂಗಳೂರು(reporterkarnataka.com):ಕರ್ನಾಟಕ ಸರಕಾರ ಜೂಲೈ ಒಂದರಿಂದ ಎಲ್ಲ ಬಿಪಿಎಲ್, ಅಂತ್ಯೋದಯ ಕಾರ್ಡದಾರರಿಗೆ ಈಗ ನೀಡಲಾಗುತ್ತಿದ್ದ 5 ಕೆಜಿ ಅಕ್ಕಿಯನ್ನು ಹೆಚ್ಚಿಸಿ ತಲಾ 10 ಕೆಜಿ ಅಕ್ಕಿ ಅಥವಾ ಆಹಾರಧಾನ್ಯ ನೀಡಲು ನಿರ್ಧರಿಸಿ ಪ್ರಕಟಿಸಿದ್ದು ಸ್ವಾಗತಾರ್ಹವಾಗಿದೆ.
ಆದರೇ, ಒಕ್ಕೂಟ ಸರಕಾರವು ರಾಜ್ಯಕ್ಕೆ ಹೆಚ್ಚುವರಿ ಆಹಾರಧಾನ್ಯ ನೀಡುವಲ್ಲಿ ಸಂಕುಚಿತ ರಾಜಕೀಯ ಮಾಡುತ್ತಿರುವುದು ತೀವ್ರ ಖಂಡನೀಯವಾಗಿದೆ.

ರಾಜ್ಯ ಸರಕಾರದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹೆಚ್ಚುವರಿ ಆಹಾರಧಾನ್ಯ ನೀಡಲು ಭಾರತ ಆಹಾರ ನಿಗಮದ ಅಧಿಕಾರಿಗಳು ಒಪ್ಪಿದ್ದರೂ ಕೂಡಾ, ಒಕ್ಕೂಟ ಸರಕಾರ ಬಡವರ ವಿರೋಧಿಯಾಗಿ ನಿಂತಿರುವುದು ಅಕ್ಷಮ್ಯವಾಗಿದೆ. ಬಿಜೆಪಿ ಮತ್ತು ಒಕ್ಕೂಟ ಸರಕಾರ ತಮ್ಮ ಸಂಕುಚಿತ ಜನ ವಿರೋದಿ ರಾಜಕಾರಣವನ್ನು ಈ ಕೂಡಲೇ ಕೈ ಬಿಟ್ಟು ಒಪ್ಪಂದದಂತೆ ಭಾರತ ಆಹಾರ ನಿಗಮದ ಮೂಲಕ ಆಹಾರ ಧಾನ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಪಿಐಎಂ ಪಕ್ಷವು ಒಕ್ಕೂಟ ಸರಕಾರ ಹಾಗೂ ಪ್ರಧಾನ ಮಂತ್ರಿಗಳನ್ನು ಬಲವಾಗಿ ಒತ್ತಾಯಿಸುತ್ತದೆ.
ರಾಜ್ಯ ಸರಕಾರದ ಈ ಯೋಜನೆಯು ಬಡವರ ಹಸಿವು ನೀಗಿಸಲು ನೆರವಾಗುವ ಯೋಜನೆಯಾಗಿದ್ದು ಇದು ಹಸಿವಿನ ಸೂಚ್ಯಂಕದಲ್ಲಿ ಅತ್ಯಂತ ತಳ ಮಟ್ಟದಲ್ಲಿರುವ ನಮ್ಮ ದೇಶವನ್ನು ಸ್ವಲ್ಪವಾದರೂ ಮೇಲೆತ್ತುವ ಯೋಜನೆಯೆಂಬುದನ್ನು ಒಕ್ಕೂಟ ಸರಕಾರ ಅರಿಯ ಬೇಕು.
ಒಕ್ಕೂಟ ಸರಕಾರ ರಾಜ್ಯ ಹಿತದ ವಿರುದ್ದ ನಗ್ಙವಾಗಿ ನಿಂತಿರುವಾಗ ನಮ್ಮ ರಾಜ್ಯ ಬಹುತೇಕರು ಬಿಜೆಪಿ ಎಂಪಿಗಳಿರುವಾಗ ಅವರು ಬಾಯಿ ಹೊಲೆದುಕೊಂಡಿರುವುದು ಅವರ ವಿರೋದಿ ನೀತಿಯನ್ನು ಬಯಲುಗೊಳಿಸುತ್ತದೆ ಎಂದು ಕಟುವಾಗಿ ಠೀಕಿಸಿದೆ.
ಜನರಿಗೆ ಆಹಾರಧಾನ್ಯದ ಬದಲು ನಗದು ವರ್ಗಾವಣೆ ಮಾಡುವಂತೆ ಸೂಚಿಸುವ ಬಿಜೆಪಿ ಧೋರಣೆಯು ಬಡವರಪರವಾಗಿರದೇ ಲೂಟಿಕೋರ ಕಾರ್ಪೊರೇಟ್ ಕಂಪನಿಗಳ ಪರವಾದ ನೀತಿಯಾಗಿದೆ.
ಒಕ್ಕೂಟ ಸರಕಾರದ ಈ ಜನ ವಿರೋಧಿ ನೀತಿಯನ್ನು ಖಂಡಿಸಿ ರಾಜ್ಯದಾದ್ಯಂತ ಜೂನ್ 20 ರಂದು ಒಕ್ಕೂಟ ಸರಕಾರದ ಬಡವರ ವಿರೋಧಿ ನೀತಿಯ ಭೂತ ದಹನ ಮಾಡುವ‌ ಮೂಲಕ ತೀವ್ರ ಪ್ರತಿಭಟನಾ ಪ್ರದರ್ಶನ ನಡೆಸಲು ಸಿಪಿಎಂ ರಾಜ್ಯ ಸಮಿತಿ ತನ್ನೆಲ್ಲಾ ಘಟಕಗಳಿಗೆ ಮತ್ತು ರಾಜ್ಯದ ಜನತೆಗೆ ಕರೆ ನೀಡುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು