11:32 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ: ಲೀಡ್ ಬ್ಯಾಂಕ್ ಸಭೆಯಲ್ಲಿ ಸಂಸದ ಕ್ಯಾ. ಚೌಟ ಸೂಚನೆ

10/09/2024, 22:16

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದರು.
ನಗರದ ಉರ್ವ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ದ.ಕ ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ದೊರೆಯುವ ಸಾಲ-ಸೌಲಭ್ಯಗಳ ಬಗ್ಗೆ ಅರ್ಹ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಿ ಅದರ ಅನುಕೂಲ ದೊರಕಿಸಿ ಕೊಡುವುದಕ್ಕೆ ಜಿಲ್ಲೆಯಲ್ಲಿರುವ ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.
ಪಿಎಂಇಜಿಪಿ ಯೋಜನೆಗೆ ಫಲಾನುಭವಿಗಳ ಆಯ್ಕೆ ಹಾಗೂ ಆಯ್ಕೆಗೊಂಡ ಫಲಾನುಭವಿಗಳ ಸಹಾಯಧನ ವಿಚಾರವಾಗಿಯೂ ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಸದರು ವಿಸ್ತೃತವಾಗಿ ಚರ್ಚಿಸಿದರು.
ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರೈತರಿಗೆ ಕೆಸಿಸಿ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ಒದಗಿಸುವುದಕ್ಕೆ ಬ್ಯಾಂಕ್ಗಳು ಆದ್ಯತೆ ನೀಡಬೇಕು. ಜತೆಗೆ ಉನ್ನತ ವಿದ್ಯಾಭ್ಯಾಸಕ್ಕೆ ಸಾಲ ನೀಡುವಲ್ಲಿ ಕೂಡ ಬ್ಯಾಂಕ್ಗಳು ಯಾವುದೇ ವಿಳಂಬ ಮಾಡದೆ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಸಾಲ ಮಂಜೂರು ಮಾಡಬೇಕೆಂದು ಬ್ಯಾಂಕ್ ಅಧಿಕಾರಿಗಳಿಗೆ ಕ್ಯಾ. ಚೌಟ ಅವರು ಸೂಚಿಸಿದರು.
ಪಿಎಂ-ಸ್ವನಿಧಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಾಲ-ಸೌಲಭ್ಯ ಒದಗಿಸಲಾಗುತ್ತಿದೆ. ಈ ಯೋಜನೆ ಬಗ್ಗೆ ಬೀದಿಬದಿ ವ್ಯಾಪಾರಿಗಳಿಗೆ ಹೆಚ್ಚಿನ ಅರಿವು ಮೂಡಿಸುವ ಜತೆಗೆ ಅವರಿಗೆ ಸಾಲ ಸೌಲಭ್ಯವನ್ನು ಒದಗಿಸುವುದಕ್ಕೆ ಅಗತ್ಯ ಕ್ರಮ ವಹಿಸಬೇಕೆಂದು ಅವರು ತಿಳಿಸಿದರು.
ಸಂಸದರಾಗಿ ಆಯ್ಕೆಗೊಂಡ ಬಳಿಕ ಪಾಲ್ಗೊಂಡಿದ್ದ ಇಂದಿನ ಈ ಮೊದಲ ಲೀಡ್ ಬ್ಯಾಂಕ್ ಸಭೆಯಲ್ಲಿ ಕ್ಯಾ. ಚೌಟ ಅವರು ಜಿಲ್ಲೆಯ ಬ್ಯಾಂಕಿಂಗ್ ವಲಯದಲ್ಲಿರುವ ವಿವಿಧ ಯೋಜನೆಗಳು, ಗ್ರಾಹಕರ ಸಮಸ್ಯೆಗಳು ಸಮಸ್ಯೆಗಳು ಹಾಗೂ ಸಾಲ- ಸೌಲಭ್ಯಗಳ ವಿತರಣೆಯಲ್ಲಿ ಬ್ಯಾಂಕ್ ಗಳ ಪ್ರಗತಿ ಬಗ್ಗೆಯೂ ಬ್ಯಾಂಕ್ ಅಧಿಕಾರಿಗಳ ಜತೆಗೆ ಸಮಗ್ರವಾಗಿ ಪರಾಮರ್ಶೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು