11:44 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ಹೊಸ ಮಾರ್ಗಸೂಚಿ ಉಲ್ಲಂಘಿಸಿದರೆ ಫೇಸ್‌ಬುಕ್‌, ಟ್ವಿಟರ್‌,  ಇನ್ ಸ್ಟಾಗ್ರಾಂ ಸೇವೆ ಸ್ಥಗಿತ? 

25/05/2021, 19:01

ನವದೆಹಲಿ(reporterkarnataka news): ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳ ಸೇವೆ ರದ್ದಾಗಲಿದೆಯೇ? ಇಂತಹದೊಂದು ಪ್ರಶ್ನೆ ದೇಶದಲ್ಲಿ ಉದ್ಬವಿಸಿದೆ. ಇದಕ್ಕೆ ಕಾರಣವೂ ಇದೆ. ಕೇಂದ್ರ ಸರಕಾರ ಅನುಷ್ಠಾನಗೊಳಿಸಿರುವ ಹೊಸ ಮಾರ್ಗಸೂಚಿ ಪಾಲಿಸದಿದ್ದರೆ ಫೇಸ್‌ಬುಕ್‌ , ಟ್ವಿಟರ್‌, ಇನ್‌ಸ್ಟಾಗ್ರಾಮ್‌ ಮುಂತಾದ ಸಾಮಾಜಿಕ ಜಾಲತಾಣಗಳ ವಿರುದ್ಧ ಕ್ರಮ ಜರುಗಿಸುವ ಸಾಧ್ಯತೆ ಇದೆ. ಇದರ ಪರಿಣಾಮ ಈ ಜಾಲತಾಣಗಳ ಸೇವೆ ಸ್ಥಗಿತವಾಗುವ ಅಪಾಯವೂ ಇದೆ ಎಂದು ತಿಳಿದು ಬಂದಿದೆ.

ಕಳೆದ ಫೆಬ್ರವರಿಯಲ್ಲಿ ಕೇಂದ್ರ ಸರಕಾರ ಸಾಮಾಜಿಕ ಜಾಲತಾಣಗಳು, ಒಟಿಟಿ ಮಾಧ್ಯಮಗಳಿಗೆ ಸಂಬಂಧಿಸಿ ನೀತಿ ಸಂಹಿತೆ ರೂಪಿಸಿತ್ತು. ಅದರ ಜಾರಿಗೆ ಮೂರು ತಿಂಗಳಿನ ಗಡುವು ನೀಡಿತ್ತು. ಇದೀಗ ಗಡುವು ಮುಕ್ತಾಯವಾಗುತ್ತಿದ್ದು, ನಿಯಮಗಳನ್ನು ಪಾಲಿಸದಿದ್ದರೆ, ಭಾರತದಲ್ಲಿ ಅಂಥ ಸಂಸ್ಥೆಗಳ ಮಾನ್ಯತೆ ರದ್ದಾಗುವ ಸಾಧ್ಯತೆ ಇದೆ. ಅವುಗಳ ವಿರುದ್ಧ ಕ್ರಿಮಿನಲ್‌ ವಿಚಾರಣೆಯೂ ನಡೆಯಬಹುದು. 

ಸಾಮಾಜಿಕ ಜಾಲತಾಣ ಕಂಪನಿ ‘ಕೂ’ ಹೊರತುಪಡಿಸಿ ಮಿಕ್ಕಿದ ಪ್ರಮುಖ ಜಾಲತಾಣಗಳು ನಿಯಮಾನುಸಾರ ಸ್ಥಳೀಯ ಅಹವಾಲು ಅಧಿಕಾರಿಯನ್ನು ನೇಮಕ ಮಾಡಿಲ್ಲ. ಹೊಸ ಕಾನೂನು ಪ್ರಕಾರ ರಕ್ಷಣೆ, ವಿದೇಶಾಂಗ, ಗೃಹ, ಕಾನೂನು, ವಾರ್ತಾ ಮತ್ತು ಪ್ರಸಾರ, ಐಟಿ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯು ನೀತಿ ಸಂಹಿತೆ ಜಾರಿಯ ಮೇಲುಸ್ತುವಾರಿ ವಹಿಸಲಿದೆ. 

ನಿಯಮಗಳು ಉಲ್ಲಂಘನೆಯಾದರೆ ಈ ಸಮಿತಿ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸುವ ಅಧಿಕಾರ ಹೊಂದಿದೆ. ಜಂಟಿ ಕಾರ್ಯದರ್ಶಿ ಅಥವಾ ಮೇಲ್ಮಟ್ಟದ ಅಧಿಕಾರಿ ನಿಯುಕ್ತಿಯಾಗಲಿದ್ದು, ಅವರು ಕಾನೂನು ಉಲ್ಲಂಘನೆಯಾದ ಪಕ್ಷದಲ್ಲಿ ಜಾಲತಾಣಗಳ ವಿಷಯಗಳನ್ನು ಬ್ಲಾಕ್‌ ಮಾಡಲು ನೇರವಾಗಿ ಸೂಚಿಸಬಹುದು. 

ಇತ್ತೀಚಿನ ಸುದ್ದಿ

ಜಾಹೀರಾತು