8:20 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ಹೊಸ ಮಾರ್ಗಸೂಚಿ ಉಲ್ಲಂಘಿಸಿದರೆ ಫೇಸ್‌ಬುಕ್‌, ಟ್ವಿಟರ್‌,  ಇನ್ ಸ್ಟಾಗ್ರಾಂ ಸೇವೆ ಸ್ಥಗಿತ? 

25/05/2021, 19:01

ನವದೆಹಲಿ(reporterkarnataka news): ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳ ಸೇವೆ ರದ್ದಾಗಲಿದೆಯೇ? ಇಂತಹದೊಂದು ಪ್ರಶ್ನೆ ದೇಶದಲ್ಲಿ ಉದ್ಬವಿಸಿದೆ. ಇದಕ್ಕೆ ಕಾರಣವೂ ಇದೆ. ಕೇಂದ್ರ ಸರಕಾರ ಅನುಷ್ಠಾನಗೊಳಿಸಿರುವ ಹೊಸ ಮಾರ್ಗಸೂಚಿ ಪಾಲಿಸದಿದ್ದರೆ ಫೇಸ್‌ಬುಕ್‌ , ಟ್ವಿಟರ್‌, ಇನ್‌ಸ್ಟಾಗ್ರಾಮ್‌ ಮುಂತಾದ ಸಾಮಾಜಿಕ ಜಾಲತಾಣಗಳ ವಿರುದ್ಧ ಕ್ರಮ ಜರುಗಿಸುವ ಸಾಧ್ಯತೆ ಇದೆ. ಇದರ ಪರಿಣಾಮ ಈ ಜಾಲತಾಣಗಳ ಸೇವೆ ಸ್ಥಗಿತವಾಗುವ ಅಪಾಯವೂ ಇದೆ ಎಂದು ತಿಳಿದು ಬಂದಿದೆ.

ಕಳೆದ ಫೆಬ್ರವರಿಯಲ್ಲಿ ಕೇಂದ್ರ ಸರಕಾರ ಸಾಮಾಜಿಕ ಜಾಲತಾಣಗಳು, ಒಟಿಟಿ ಮಾಧ್ಯಮಗಳಿಗೆ ಸಂಬಂಧಿಸಿ ನೀತಿ ಸಂಹಿತೆ ರೂಪಿಸಿತ್ತು. ಅದರ ಜಾರಿಗೆ ಮೂರು ತಿಂಗಳಿನ ಗಡುವು ನೀಡಿತ್ತು. ಇದೀಗ ಗಡುವು ಮುಕ್ತಾಯವಾಗುತ್ತಿದ್ದು, ನಿಯಮಗಳನ್ನು ಪಾಲಿಸದಿದ್ದರೆ, ಭಾರತದಲ್ಲಿ ಅಂಥ ಸಂಸ್ಥೆಗಳ ಮಾನ್ಯತೆ ರದ್ದಾಗುವ ಸಾಧ್ಯತೆ ಇದೆ. ಅವುಗಳ ವಿರುದ್ಧ ಕ್ರಿಮಿನಲ್‌ ವಿಚಾರಣೆಯೂ ನಡೆಯಬಹುದು. 

ಸಾಮಾಜಿಕ ಜಾಲತಾಣ ಕಂಪನಿ ‘ಕೂ’ ಹೊರತುಪಡಿಸಿ ಮಿಕ್ಕಿದ ಪ್ರಮುಖ ಜಾಲತಾಣಗಳು ನಿಯಮಾನುಸಾರ ಸ್ಥಳೀಯ ಅಹವಾಲು ಅಧಿಕಾರಿಯನ್ನು ನೇಮಕ ಮಾಡಿಲ್ಲ. ಹೊಸ ಕಾನೂನು ಪ್ರಕಾರ ರಕ್ಷಣೆ, ವಿದೇಶಾಂಗ, ಗೃಹ, ಕಾನೂನು, ವಾರ್ತಾ ಮತ್ತು ಪ್ರಸಾರ, ಐಟಿ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯು ನೀತಿ ಸಂಹಿತೆ ಜಾರಿಯ ಮೇಲುಸ್ತುವಾರಿ ವಹಿಸಲಿದೆ. 

ನಿಯಮಗಳು ಉಲ್ಲಂಘನೆಯಾದರೆ ಈ ಸಮಿತಿ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸುವ ಅಧಿಕಾರ ಹೊಂದಿದೆ. ಜಂಟಿ ಕಾರ್ಯದರ್ಶಿ ಅಥವಾ ಮೇಲ್ಮಟ್ಟದ ಅಧಿಕಾರಿ ನಿಯುಕ್ತಿಯಾಗಲಿದ್ದು, ಅವರು ಕಾನೂನು ಉಲ್ಲಂಘನೆಯಾದ ಪಕ್ಷದಲ್ಲಿ ಜಾಲತಾಣಗಳ ವಿಷಯಗಳನ್ನು ಬ್ಲಾಕ್‌ ಮಾಡಲು ನೇರವಾಗಿ ಸೂಚಿಸಬಹುದು. 

ಇತ್ತೀಚಿನ ಸುದ್ದಿ

ಜಾಹೀರಾತು