5:07 AM Thursday13 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಕೇಂದ್ರದ ಅನುಮೋದನೆ ಸಿಕ್ಕಿದ ತಕ್ಷಣ ಹೊಸ ಅಂಗನವಾಡಿ ಕೇಂದ್ರ: ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

13/12/2024, 14:28

ಬೆಳಗಾವಿ(reporterkarnataka.com): ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
ಶುಕ್ರವಾರ ವಿಧಾನ ಪರಿಷತ್‌ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022ರಲ್ಲೇ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.
ಹಿಂದುಳಿದ ವರ್ಗಗಳ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವುದೇ ಅಂಗನವಾಡಿಯ ಪರಿಕಲ್ಪನೆ. ಇದನ್ನು ಕರ್ನಾಟಕ ಸರ್ಕಾರ ಅಚ್ಚುಕಟ್ಟಾಗಿ ನಿಭಾಯಿಸುತ್ತಿದೆ. ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶೀಘ್ರವೇ ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು.
ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕತೆವಿರುತ್ತದೆ. ಈ ಸಂಬಂಧ ನಾನು ಈಗಾಗಲೇ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರನ್ನು 3 ಬಾರಿ ಭೇಟಿಯಾಗಿ ಮನವಿ ಸಲ್ಲಿಸಿರುವೆ ಎಂದರು.
ಶಾಲಾ ಆವರಣದಲ್ಲಿ ನಿವೇಶನ ಕೋರಿ ಈಗಾಗಲೇ ಕ್ಷೇತ್ರದ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಪ್ರಸ್ತುತ ಶಾಲಾ ಕೊಠಡಿಗಳಲ್ಲಿ ಯಾವುದೇ ತೊಂದರೆಯಿಲ್ಲದೆ ಅಂಗನವಾಡಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ 22.92 ಕೋಟಿ ಬಿಡುಗಡೆಯಾಗಿರುತ್ತದೆ. ಈಗಾಗಲೇ 337 ಅಂಗನವಾಡಿ ಕಟ್ಟಡಗಳ ಕಾಮಗಾಗಿ ಪೂರ್ಣಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು