4:47 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕೇಂದ್ರದ ಅನುಮೋದನೆ ಸಿಕ್ಕಿದ ತಕ್ಷಣ ಹೊಸ ಅಂಗನವಾಡಿ ಕೇಂದ್ರ: ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

13/12/2024, 14:28

ಬೆಳಗಾವಿ(reporterkarnataka.com): ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
ಶುಕ್ರವಾರ ವಿಧಾನ ಪರಿಷತ್‌ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022ರಲ್ಲೇ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.
ಹಿಂದುಳಿದ ವರ್ಗಗಳ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವುದೇ ಅಂಗನವಾಡಿಯ ಪರಿಕಲ್ಪನೆ. ಇದನ್ನು ಕರ್ನಾಟಕ ಸರ್ಕಾರ ಅಚ್ಚುಕಟ್ಟಾಗಿ ನಿಭಾಯಿಸುತ್ತಿದೆ. ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶೀಘ್ರವೇ ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು.
ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕತೆವಿರುತ್ತದೆ. ಈ ಸಂಬಂಧ ನಾನು ಈಗಾಗಲೇ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರನ್ನು 3 ಬಾರಿ ಭೇಟಿಯಾಗಿ ಮನವಿ ಸಲ್ಲಿಸಿರುವೆ ಎಂದರು.
ಶಾಲಾ ಆವರಣದಲ್ಲಿ ನಿವೇಶನ ಕೋರಿ ಈಗಾಗಲೇ ಕ್ಷೇತ್ರದ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಪ್ರಸ್ತುತ ಶಾಲಾ ಕೊಠಡಿಗಳಲ್ಲಿ ಯಾವುದೇ ತೊಂದರೆಯಿಲ್ಲದೆ ಅಂಗನವಾಡಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ 22.92 ಕೋಟಿ ಬಿಡುಗಡೆಯಾಗಿರುತ್ತದೆ. ಈಗಾಗಲೇ 337 ಅಂಗನವಾಡಿ ಕಟ್ಟಡಗಳ ಕಾಮಗಾಗಿ ಪೂರ್ಣಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು